📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ

ಇನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ, ಇಂದು ಸಂಜೆಯ ಹೊತ್ತಿಗೆ ಅವರು ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಆದರೆ, ನಿಯೋಜಿತ ಮುಖ್ಯಮಂತ್ರಿ ಎಂದೇ ಹೇಳಲಾಗುವ ಡಿಕೆ ಶಿವಕುಮಾರ್ ಗೆ ಆ ಕುರ್ಚಿ ವಿಪರೀತ ಕಷ್ಟವನ್ನುಂಟುಮಾಡಲಿದೆ ಅನ್ನುವುದಂತೂ ಪಕ್ಕಾ ಆಗಿದೆ.

ಈಗಾಗಲೇ, ಮುಂದೆ ಏನು ಮಾಡಬೇಕೆನ್ನುವುದರ ಪ್ಲಾನುಗಳು ತಯಾರಾಗುತ್ತಿವೆ. ಡಿಕೆ ಶಿವಕುಮಾರ್ ಶುಕ್ರವಾರ ಅಥವಾ ಭಾನುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ನಿಘಂಟಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಮಾಡಬೇಡಿ ಅಂತ ರಾಹುಲ್ ಗಾಂಧಿಯ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ರಾಹುಲ್ ಗಾಂಧಿ, ಅವರ ಬೇಡಿಕೆಗೆ ಒಪ್ಪಲು ಸಾಧ್ಯವೇ ಇರಲಿಲ್ಲ. ಸೋನಿಯಾ ಗಾಂಧಿ ಹಾಗೂ ಪ್ರಿಯಂಕಾ ಗಾಂಧಿ ಇಬ್ಬರು ಡಿಕೆ ಶಿವಕುಮಾರ್ ಪರವಾಗಿ ಗಟ್ಟಿಯಾಗಿ ನಿಂತಿದ್ದರು. ರಾಹುಲ್ ಗಾಂಧಿ ಈ ವಿಚಾರದಲ್ಲಿ ಸಿದ್ದರಾಮಯ್ಯಗೆ ಸಹಕರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ರಾಹುಲ್ ಗಾಂಧಿ ಸಿದ್ದರಾಮಯ್ಯಗೆ ಬೇರೆಯದೇ ಆದ ದೊಡ್ಡ  ಅಸ್ತ್ರವನ್ನು ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ನಿಮಗೆ ಬೇಕಾದವರಿಗೆ 20 ಸಚಿವ ಸ್ಥಾನವಿರುತ್ತದೆ. ಆಸ್ಥಾನವನ್ನು ನೀವು ಯಾರಿಗೆ ಬೇಕಾದರೂ ನೀಡಬಹುದು ಎಂಬ ಅಸ್ತ್ರವನ್ನು ಸಿದ್ದರಾಮಯ್ಯರಿಗೆ ನೀಡಿದ್ದಾರೆ. ಹಾಗೆಯೇ, ನಾಲ್ಕು ಡಿಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಪ್ರಬಲ ವಿರೋಧವನ್ನು ಒಡ್ಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ನಾನೊಬ್ಬನೇ ಡಿಸಿಎಂ ಆಗಿದ್ದೆ. ಈಗಲೂ ಡಿಸಿಎಂ ಒಬ್ಬರೇ ಆಗಿರಬೇಕು ಅನ್ನುವುದು ಡಿಕೆಶಿ ಪ್ರತಿಪಾದನೆ. ಅದೇ ರೀತಿ, ಸಿದ್ದರಾಮಯ್ಯರಿಗೆ ಈ ಮೂರು ವರ್ಷಗಳ ಕಾಲ ಎಷ್ಟು ಸ್ವಾತಂತ್ರ್ಯವಿತ್ತೋ ಅಷ್ಟೇ ಸ್ವಾತಂತ್ರ್ಯ ನನಗಿರಬೇಕು ಅನ್ನುವ ಬೇಡಿಕೆಯನ್ನು ರಾಹುಲ್ ಗಾಂಧಿ ಮುಂದೆ ಡಿಕೆಶಿ ಇಟ್ಟಿದ್ದಾರೆ. ಎರಡುವರೆ ವರ್ಷ ಆಡಳಿತದ ನಂತರ ಕೊಡಬೇಕಿದ್ದ ಅಧಿಕಾರವನ್ನು 3 ವರ್ಷದವರೆಗೆ ಸಿದ್ದರಾಮಯ್ಯನವರು ಅನುಭವಿಸಿದ್ದಾರೆ. ಮತ್ತೆ ಈಗ, ನನ್ನ ಅಧಿಕಾರದ ಅವಧಿಯಲ್ಲಿ ಪದೇ ಪದೇ ಬಂದು ಅಧಿಕಾರ ಚಲಾಯಿಸುವುದು ನನಗೆ ಸುತಾರಾಮ್ ಇಷ್ಟವಿಲ್ಲ ಎಂದು ಡಿಕೆಶಿ ಖಡಕ್ಕಾಗಿ ಹೇಳಿದ್ದರೂ, ರಾಹುಲ್ ಗಾಂಧಿ ಆ ವಿಚಾರದಲ್ಲಿ ಮೌನರಾಗಿದ್ದಾರೆಂದು ತಿಳಿದು ಬಂದಿದೆ. 

ಇಂದು ಬೆಳಗ್ಗಿನ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿದಿದೆ. ಆಪ್ತ ಶಾಸಕರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಆಪ್ತ ಸಮಾಲೋಚನೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹಾಗೂ ಇಂಧನ ಸಚಿವ ಜಾರ್ಜ್ ಇಬ್ಬರು ಮುಂದಿನ ಸಂಪುಟದಲ್ಲಿ ತಾವು ಇರುವುದಿಲ್ಲ ಅಂತ ಹೇಳಿಕೊಳ್ಳುತ್ತಿದ್ದಾರೆ. ಈಗಾಗಲೇ ಅವರಿಗೆ ಮಾಹಿತಿ ಹೋಗಿದೆ. ಡಿಕೆ ಸಂಪುಟದಲ್ಲಿ ಯುವ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇರುವುದರಿಂದ, ತಮಗೆ ಸ್ಥಾನ ಸಿಗುವುದು ಡೌಟ್ . ಹಾಗಾಗಿಯೇ ತಾವಾಗಿಯೇ ತಾವು ಡಿಕೆಶಿ ಸಂಪುಟದಲ್ಲಿ ಸಚಿವರಾಗುವುದಿಲ್ಲ ಅಂತ ಹೇಳುವ ಮೂಲಕ ಹೊಸ ದಾಳ ಉರುಳಿಸಲು ತಯಾರಿ ನಡೆಸಿದಂತಿದೆ. ಒಟ್ಟಿನಲ್ಲಿ ಇಂದು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ, ರಾಜ್ಯಪಾಲರು ಊರಿನಲ್ಲಿಲ್ಲದ ಕಾರಣ ಅವರ ರಾಜೀನಾಮೆಯನ್ನು ಪರಿಶೀಲಿಸಿ ಅಕ್ಸೆಪ್ಟ್ ಮಾಡುವುದು ಯಾವಾಗ? ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವುದು ಯಾವಾಗ ಅನ್ನುವುದು ರಾಜ್ಯಪಾಲರು ಆಗಮಿಸಿದ ನಂತರವೇ ಗೊತ್ತಾಗಲಿದೆ?

ಒಂದಂತೂ ಸತ್ಯ, ಡಿಕೆಶಿಗೆ ಸಿಎಂ ಕುರ್ಚಿಯನ್ನು ಮಗ್ಗಲು ಮುಳ್ಳನ್ನಾಗಿಸಲು ಏನೆಲ್ಲ ಮಾಡಬೇಕು ಅದೆಲ್ಲವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಅವರ ತಂಡ ಮುಂದಿನ ದಿನದಲ್ಲಿ ಹಂತ ಹಂತವಾಗಿ ಮಾಡಲಿದೆ. ಇದಕ್ಕೆ ಡಿಕೆ ಶಿವಕುಮಾರ್ ಹೇಗೆ ಎದುರಿಸುತ್ತಾರೆ, ಪ್ರತ್ಯುತ್ತರ ನೀಡುತ್ತಾರೆ ಎನ್ನುವುದು ನಿಗೂಢ ವಿಚಾರ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
ಕೊನೆಗೂ ಸೋತ ಖಾಕಿ….!!!
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?