📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್

ಕರ್ನಾಟಕ ಸಿಐಡಿ (CID)ಮತ್ತು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ “ಡಿಜಿಟಲ್ ಅರೆಸ್ಟ್” ವಂಚನೆಗೆ ಹೊಂಚು …!ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ- ಎಚ್ಚರ

ಬೆಂಗಳೂರು: ನಗರದ ಮಹಿಳೆ ನೈನಾ (Naina) ಅವರನ್ನು ಗುರಿಯಾಗಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ವಂಚನೆ ಮಾಡಲು ಅಪರಿಚಿತರು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೋಸಗಾರರು ತಮ್ಮನ್ನು ಬೆಂಗಳೂರು ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಮಹಿಳೆಯನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ತಮ್ಮ ಹೇಳಿಕೆಗಳು ನಿಜವೆಂದು ತೋರಿಸಲು, ಆರೋಪಿಗಳು ಸುಪ್ರೀಂ ಕೋರ್ಟ್ ಮತ್ತು ನಗರ ಪೊಲೀಸ್ ಆಯುಕ್ತರಿಂದ ಆದೇಶವಿದೆ ಎಂದು ಹೇಳುವ ಸೀಮಂತ್ ಕುಮಾರ್ ಸಿಂಗ್ ಹೆಸರಿರುವ ನಕಲಿ ದಾಖಲೆಗಳನ್ನು ಕಳುಹಿಸಿದ್ದಾರೆ. ದಾಖಲೆಗಳಲ್ಲಿ ಬೆಂಗಳೂರು ಪೊಲೀಸ್ ಆಯೋಗದ ಮುದ್ರೆ ಮತ್ತು ಸಹಿ ಇದೆ ಎಂದು ಹೇಳಲಾಗಿದೆ…

ಘಟನೆ ಹೇಗೆ ನಡೆಯಿತು?

ವಂಚಕರು ಮೊದಲು ನೈನಾಗೆ ಫೋನ್ ಮಾಡಿ, “ನಿಮ್ಮ ತಾಯಿ ಅಕ್ರಮ (illeagle)ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿ ಭಯ ಹುಟ್ಟಿಸಿದರು.

ನಂತರ ಕರೆ ವೀಡಿಯೊ ಕಾಲ್‌ಗೆ ಬದಲಿಸಿ, ತಮ್ಮನ್ನು ಪೊಲೀಸ್ ಅಧಿಕಾರಿಗಳಂತೆ ತೋರಿಸಿಕೊಂಡರು.

ಅವರು ಕರ್ನಾಟಕ ಸಿಐಡಿ (CID) ಹೆಸರಿನಲ್ಲಿ ನಕಲಿ ವರದಿ ಹಾಗೂ ಕೆಲವು ಕೃತಕ ದಾಖಲೆಗಳನ್ನು ನೈನಾಳ ಹೆಸರಿನಲ್ಲಿ ಸೃಷ್ಟಿಸಿ ಕಳುಹಿಸಿದರು.

“ತನಿಖೆ ನಡೆಯುತ್ತಿದೆ, ನೀವು ಸಹಕರಿಸಬೇಕು” ಎಂದು ಒತ್ತಡ ಹಾಕಿ ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ಹಣ ಪಡೆಯಲು ಯತ್ನಿಸಿದರು.

ದಾಖಲೆಗಳನ್ನು ಗಮನವಿಟ್ಟು ಪರಿಶೀಲಿಸಿದ ನೈನಾ ಅವರಿಗೆ ಅನುಮಾನ ಬಂತು,ತಕ್ಷಣವೇ ಅವರು ಪೊಲೀಸರನ್ನು ಸಂಪರ್ಕಿಸಿ, ಬಳಿಕ ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಮೂಲಕ ಆನ್‌ಲೈನ್ ದೂರು ದಾಖಲಿಸಿದರು. ಮಹಿಳೆಯ ಎಚ್ಚರಿಕೆಯಿಂದ ದೊಡ್ಡ ಮೋಸ ತಪ್ಪಿತು.

ಜನರಿಗೆ ಎಚ್ಚರಿಕೆ

ಈ ಘಟನೆ ಸೈಬರ್ ವಂಚಕರು ಹೊಸ ರೀತಿಯಲ್ಲಿ ಜನರನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ನಿಮಗೆ ಗೊತ್ತಿರಬೇಕಾದ ಹಾಗೇ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ಪೊಲೀಸ್ ಅಥವಾ ಸರ್ಕಾರಿ ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ. ಅಪರಿಚಿತ ಕರೆಗಳಲ್ಲಿ ವೈಯಕ್ತಿಕ ಮಾಹಿತಿ ಅಥವಾ ಹಣ ಕಳುಹಿಸಬೇಡಿ. ಸಂದೇಹಾಸ್ಪದ ದಾಖಲೆಗಳು ಬಂದರೆ ತಕ್ಷಣ ಪರಿಶೀಲಿಸಿ. ಒತ್ತಡ ಹಾಕಿ ತಕ್ಷಣ ಹಣ ಕೇಳಿದರೆ ಅದು ಬಹುತೇಕ ಮೋಸವೇ ಆಗಿರಬಹುದು.

ಇಂತಹ ಕರೆ ಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಸೈಬರ್ ಕ್ರೈಮ್ ಪೋರ್ಟಲ್‌ಗೆ ದೂರು ನೀಡಿ ಕರ್ನಾಟಕ ಪೊಲೀಸ್ ಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ತುರ್ತು ಸಹಾಯಕ್ಕೆ 1930 ಸೈಬರ್ ಕ್ರೈಮ್ ಹೆಲ್ಪ್‌ಲೈನ್ ಸಂಪರ್ಕಿಸಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

“ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಸಾರ್ವಜನಿಕರಲ್ಲಿ ವಿನಂತಿ …!
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ