📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್

ಕರ್ನಾಟಕ ಸಿಐಡಿ (CID)ಮತ್ತು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ “ಡಿಜಿಟಲ್ ಅರೆಸ್ಟ್” ವಂಚನೆಗೆ ಹೊಂಚು …!ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ- ಎಚ್ಚರ

ಬೆಂಗಳೂರು: ನಗರದ ಮಹಿಳೆ ನೈನಾ (Naina) ಅವರನ್ನು ಗುರಿಯಾಗಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ವಂಚನೆ ಮಾಡಲು ಅಪರಿಚಿತರು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೋಸಗಾರರು ತಮ್ಮನ್ನು ಬೆಂಗಳೂರು ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಮಹಿಳೆಯನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ತಮ್ಮ ಹೇಳಿಕೆಗಳು ನಿಜವೆಂದು ತೋರಿಸಲು, ಆರೋಪಿಗಳು ಸುಪ್ರೀಂ ಕೋರ್ಟ್ ಮತ್ತು ನಗರ ಪೊಲೀಸ್ ಆಯುಕ್ತರಿಂದ ಆದೇಶವಿದೆ ಎಂದು ಹೇಳುವ ಸೀಮಂತ್ ಕುಮಾರ್ ಸಿಂಗ್ ಹೆಸರಿರುವ ನಕಲಿ ದಾಖಲೆಗಳನ್ನು ಕಳುಹಿಸಿದ್ದಾರೆ. ದಾಖಲೆಗಳಲ್ಲಿ ಬೆಂಗಳೂರು ಪೊಲೀಸ್ ಆಯೋಗದ ಮುದ್ರೆ ಮತ್ತು ಸಹಿ ಇದೆ ಎಂದು ಹೇಳಲಾಗಿದೆ…

ಘಟನೆ ಹೇಗೆ ನಡೆಯಿತು?

ವಂಚಕರು ಮೊದಲು ನೈನಾಗೆ ಫೋನ್ ಮಾಡಿ, “ನಿಮ್ಮ ತಾಯಿ ಅಕ್ರಮ (illeagle)ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿ ಭಯ ಹುಟ್ಟಿಸಿದರು.

ನಂತರ ಕರೆ ವೀಡಿಯೊ ಕಾಲ್‌ಗೆ ಬದಲಿಸಿ, ತಮ್ಮನ್ನು ಪೊಲೀಸ್ ಅಧಿಕಾರಿಗಳಂತೆ ತೋರಿಸಿಕೊಂಡರು.

ಅವರು ಕರ್ನಾಟಕ ಸಿಐಡಿ (CID) ಹೆಸರಿನಲ್ಲಿ ನಕಲಿ ವರದಿ ಹಾಗೂ ಕೆಲವು ಕೃತಕ ದಾಖಲೆಗಳನ್ನು ನೈನಾಳ ಹೆಸರಿನಲ್ಲಿ ಸೃಷ್ಟಿಸಿ ಕಳುಹಿಸಿದರು.

“ತನಿಖೆ ನಡೆಯುತ್ತಿದೆ, ನೀವು ಸಹಕರಿಸಬೇಕು” ಎಂದು ಒತ್ತಡ ಹಾಕಿ ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ಹಣ ಪಡೆಯಲು ಯತ್ನಿಸಿದರು.

ದಾಖಲೆಗಳನ್ನು ಗಮನವಿಟ್ಟು ಪರಿಶೀಲಿಸಿದ ನೈನಾ ಅವರಿಗೆ ಅನುಮಾನ ಬಂತು,ತಕ್ಷಣವೇ ಅವರು ಪೊಲೀಸರನ್ನು ಸಂಪರ್ಕಿಸಿ, ಬಳಿಕ ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಮೂಲಕ ಆನ್‌ಲೈನ್ ದೂರು ದಾಖಲಿಸಿದರು. ಮಹಿಳೆಯ ಎಚ್ಚರಿಕೆಯಿಂದ ದೊಡ್ಡ ಮೋಸ ತಪ್ಪಿತು.

ಜನರಿಗೆ ಎಚ್ಚರಿಕೆ

ಈ ಘಟನೆ ಸೈಬರ್ ವಂಚಕರು ಹೊಸ ರೀತಿಯಲ್ಲಿ ಜನರನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ನಿಮಗೆ ಗೊತ್ತಿರಬೇಕಾದ ಹಾಗೇ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ಪೊಲೀಸ್ ಅಥವಾ ಸರ್ಕಾರಿ ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ. ಅಪರಿಚಿತ ಕರೆಗಳಲ್ಲಿ ವೈಯಕ್ತಿಕ ಮಾಹಿತಿ ಅಥವಾ ಹಣ ಕಳುಹಿಸಬೇಡಿ. ಸಂದೇಹಾಸ್ಪದ ದಾಖಲೆಗಳು ಬಂದರೆ ತಕ್ಷಣ ಪರಿಶೀಲಿಸಿ. ಒತ್ತಡ ಹಾಕಿ ತಕ್ಷಣ ಹಣ ಕೇಳಿದರೆ ಅದು ಬಹುತೇಕ ಮೋಸವೇ ಆಗಿರಬಹುದು.

ಇಂತಹ ಕರೆ ಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಸೈಬರ್ ಕ್ರೈಮ್ ಪೋರ್ಟಲ್‌ಗೆ ದೂರು ನೀಡಿ ಕರ್ನಾಟಕ ಪೊಲೀಸ್ ಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ತುರ್ತು ಸಹಾಯಕ್ಕೆ 1930 ಸೈಬರ್ ಕ್ರೈಮ್ ಹೆಲ್ಪ್‌ಲೈನ್ ಸಂಪರ್ಕಿಸಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಸಾರ್ವಜನಿಕರಲ್ಲಿ ವಿನಂತಿ …!
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
“ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
“ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!