📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್

ಕರ್ನಾಟಕ ಸಿಐಡಿ (CID)ಮತ್ತು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ “ಡಿಜಿಟಲ್ ಅರೆಸ್ಟ್” ವಂಚನೆಗೆ ಹೊಂಚು …!ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ- ಎಚ್ಚರ

ಬೆಂಗಳೂರು: ನಗರದ ಮಹಿಳೆ ನೈನಾ (Naina) ಅವರನ್ನು ಗುರಿಯಾಗಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ವಂಚನೆ ಮಾಡಲು ಅಪರಿಚಿತರು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮೋಸಗಾರರು ತಮ್ಮನ್ನು ಬೆಂಗಳೂರು ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಮಹಿಳೆಯನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ತಮ್ಮ ಹೇಳಿಕೆಗಳು ನಿಜವೆಂದು ತೋರಿಸಲು, ಆರೋಪಿಗಳು ಸುಪ್ರೀಂ ಕೋರ್ಟ್ ಮತ್ತು ನಗರ ಪೊಲೀಸ್ ಆಯುಕ್ತರಿಂದ ಆದೇಶವಿದೆ ಎಂದು ಹೇಳುವ ಸೀಮಂತ್ ಕುಮಾರ್ ಸಿಂಗ್ ಹೆಸರಿರುವ ನಕಲಿ ದಾಖಲೆಗಳನ್ನು ಕಳುಹಿಸಿದ್ದಾರೆ. ದಾಖಲೆಗಳಲ್ಲಿ ಬೆಂಗಳೂರು ಪೊಲೀಸ್ ಆಯೋಗದ ಮುದ್ರೆ ಮತ್ತು ಸಹಿ ಇದೆ ಎಂದು ಹೇಳಲಾಗಿದೆ…

ಘಟನೆ ಹೇಗೆ ನಡೆಯಿತು?

ವಂಚಕರು ಮೊದಲು ನೈನಾಗೆ ಫೋನ್ ಮಾಡಿ, “ನಿಮ್ಮ ತಾಯಿ ಅಕ್ರಮ (illeagle)ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿ ಭಯ ಹುಟ್ಟಿಸಿದರು.

ನಂತರ ಕರೆ ವೀಡಿಯೊ ಕಾಲ್‌ಗೆ ಬದಲಿಸಿ, ತಮ್ಮನ್ನು ಪೊಲೀಸ್ ಅಧಿಕಾರಿಗಳಂತೆ ತೋರಿಸಿಕೊಂಡರು.

ಅವರು ಕರ್ನಾಟಕ ಸಿಐಡಿ (CID) ಹೆಸರಿನಲ್ಲಿ ನಕಲಿ ವರದಿ ಹಾಗೂ ಕೆಲವು ಕೃತಕ ದಾಖಲೆಗಳನ್ನು ನೈನಾಳ ಹೆಸರಿನಲ್ಲಿ ಸೃಷ್ಟಿಸಿ ಕಳುಹಿಸಿದರು.

“ತನಿಖೆ ನಡೆಯುತ್ತಿದೆ, ನೀವು ಸಹಕರಿಸಬೇಕು” ಎಂದು ಒತ್ತಡ ಹಾಕಿ ‘ಡಿಜಿಟಲ್ ಅರೆಸ್ಟ್’ ಎಂಬ ನೆಪದಲ್ಲಿ ಹಣ ಪಡೆಯಲು ಯತ್ನಿಸಿದರು.

ದಾಖಲೆಗಳನ್ನು ಗಮನವಿಟ್ಟು ಪರಿಶೀಲಿಸಿದ ನೈನಾ ಅವರಿಗೆ ಅನುಮಾನ ಬಂತು,ತಕ್ಷಣವೇ ಅವರು ಪೊಲೀಸರನ್ನು ಸಂಪರ್ಕಿಸಿ, ಬಳಿಕ ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಮೂಲಕ ಆನ್‌ಲೈನ್ ದೂರು ದಾಖಲಿಸಿದರು. ಮಹಿಳೆಯ ಎಚ್ಚರಿಕೆಯಿಂದ ದೊಡ್ಡ ಮೋಸ ತಪ್ಪಿತು.

ಜನರಿಗೆ ಎಚ್ಚರಿಕೆ

ಈ ಘಟನೆ ಸೈಬರ್ ವಂಚಕರು ಹೊಸ ರೀತಿಯಲ್ಲಿ ಜನರನ್ನು ಭಯಪಡಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ.

ನಿಮಗೆ ಗೊತ್ತಿರಬೇಕಾದ ಹಾಗೇ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು

ಪೊಲೀಸ್ ಅಥವಾ ಸರ್ಕಾರಿ ಅಧಿಕಾರಿಗಳು ವೀಡಿಯೊ ಕಾಲ್ ಮೂಲಕ “ಡಿಜಿಟಲ್ ಅರೆಸ್ಟ್” ಮಾಡುವುದಿಲ್ಲ. ಅಪರಿಚಿತ ಕರೆಗಳಲ್ಲಿ ವೈಯಕ್ತಿಕ ಮಾಹಿತಿ ಅಥವಾ ಹಣ ಕಳುಹಿಸಬೇಡಿ. ಸಂದೇಹಾಸ್ಪದ ದಾಖಲೆಗಳು ಬಂದರೆ ತಕ್ಷಣ ಪರಿಶೀಲಿಸಿ. ಒತ್ತಡ ಹಾಕಿ ತಕ್ಷಣ ಹಣ ಕೇಳಿದರೆ ಅದು ಬಹುತೇಕ ಮೋಸವೇ ಆಗಿರಬಹುದು.

ಇಂತಹ ಕರೆ ಬಂದರೆ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಸೈಬರ್ ಕ್ರೈಮ್ ಪೋರ್ಟಲ್‌ಗೆ ದೂರು ನೀಡಿ ಕರ್ನಾಟಕ ಪೊಲೀಸ್ ಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ತುರ್ತು ಸಹಾಯಕ್ಕೆ 1930 ಸೈಬರ್ ಕ್ರೈಮ್ ಹೆಲ್ಪ್‌ಲೈನ್ ಸಂಪರ್ಕಿಸಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಬಾಲಗರ್ಭಿಣಿಯರ ಸಂಖ್ಯೆ 5975….!!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್