📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ

ಭಾರತದ ಸುಪ್ರೀಂ ಕೋರ್ಟ್ ಮಾನವೀಯ ಮತ್ತು ಕಾನೂನು ದೃಷ್ಟಿಯಿಂದ ಮಹತ್ವದ ತೀರ್ಪು ನೀಡಿದೆ. 12 ವರ್ಷಗಳಿಂದ ವೇಜಿಟೇಟಿವ್ ಸ್ಥಿತಿಯಲ್ಲಿ ಇದ್ದ 31 ವರ್ಷದ ವ್ಯಕ್ತಿಗೆ ಪ್ಯಾಸಿವ್ ಯೂಥನೇಷಿಯಾ (Passive Euthanasia) ಅಡಿಯಲ್ಲಿ ಲೈಫ್ ಸಪೋರ್ಟ್ ಹಿಂಪಡೆಯಲು ಅನುಮತಿ ನೀಡಲಾಗಿದೆ. ಈ ತೀರ್ಪು “ಗೌರವಯುತ ಮರಣದ ಹಕ್ಕು” ಕುರಿತ ರಾಷ್ಟ್ರೀಯ ಚರ್ಚೆಗೆ ಮತ್ತಷ್ಟು ಮಹತ್ವ ತಂದಿದೆ.

ಪ್ರಕರಣದ ಹಿನ್ನೆಲೆ

2013ರಲ್ಲಿ ಸಂಭವಿಸಿದ ಅಪಘಾತದಲ್ಲಿ ಯುವಕನಿಗೆ ತೀವ್ರ ತಲೆಗಾಯವಾಗಿದ್ದು, ನಂತರದಿಂದ ಅವನು ಸ್ಥಿರ ವೇಜಿಟೇಟಿವ್ ಸ್ಥಿತಿ (Persistent Vegetative State) ಯಲ್ಲಿ ಇದ್ದನು.
ಅವನಿಗೆ ಸ್ವತಃ ಮಾತನಾಡಲು ಅಥವಾ ಚಲಿಸಲು ಸಾಧ್ಯವಾಗುತ್ತಿರಲಿಲ್ಲ.
ದೈನಂದಿನ ಜೀವನ ಸಂಪೂರ್ಣವಾಗಿ ವೈದ್ಯಕೀಯ ಸಾಧನಗಳ ಮೇಲೆ ಅವಲಂಬಿತವಾಗಿತ್ತು.
ಚಿಕಿತ್ಸೆ ದೀರ್ಘಕಾಲ ಮುಂದುವರೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರಲಿಲ್ಲ.

ಈ ಪರಿಸ್ಥಿತಿಯಲ್ಲಿ ಯುವಕನ ತಂದೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿ, ಮಗನಿಗೆ ಗುಣಮುಖವಾಗುವ ಸಾಧ್ಯತೆ ಇಲ್ಲದ ಕಾರಣ ಜೀವನಾಧಾರ ವ್ಯವಸ್ಥೆಗಳನ್ನು
ವೆಂಟಿಲೇಟರ್
ಫೀಡಿಂಗ್ ಟ್ಯೂಬ್
ಇತರ ಜೀವಸಹಾಯಕ ವೈದ್ಯಕೀಯ ಸಾಧನಗಳನ್ನ
ಹಿಂತೆಗೆದುಕೊಳ್ಳಲು ಅನುಮತಿ ನೀಡಬೇಕು ಎಂದು ಕೋರಿದರು.

ಸ್ಪಂದಿಸಿದ ವೈದ್ಯಕೀಯ ಮಂಡಳಿಯ ಪರಿಶೀಲನೆ ನಡಿಸಿ
ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ವೈದ್ಯಕೀಯ ತಜ್ಞರ ಮಂಡಳಿ ಯುವಕನ ಆರೋಗ್ಯವನ್ನು ಪರಿಶೀಲಿಸಿತು.

ಮಂಡಳಿಯ ವರದಿಯ ಪ್ರಮುಖ ಅಂಶಗಳು:
ರೋಗಿ ದೀರ್ಘಕಾಲದ ವೇಜಿಟೇಟಿವ್ ಸ್ಥಿತಿಯಲ್ಲಿ ಇದ್ದಾನೆ
ಮೆದುಳಿನ ಕಾರ್ಯಚಟುವಟಿಕೆಗಳಲ್ಲಿ ಸುಧಾರಣೆ ಕಾಣುವ ಸಾಧ್ಯತೆ ಅತ್ಯಂತ ಕಡಿಮೆ
ವೈದ್ಯಕೀಯ ಚಿಕಿತ್ಸೆ ಮುಂದುವರೆದರೂ ಪುನಃ ಚೇತರಿಕೆಯ ನಿರೀಕ್ಷೆ ಇಲ್ಲ ಅನ್ನೋದನ್ನ ಮನಗಂಡು ,
ನ್ಯಾಯಾಲಯ ಅಂತಿಮ ತೀರ್ಪು ನೀಡಿತು.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು

ನ್ಯಾಯಮೂರ್ತಿಗಳಾದ ಜಸ್ಟಿಸ್ ಜೇ.ಬಿ. ಪರ್ಡಿವಾಲಾ ಮತ್ತು ಜಸ್ಟಿಸ್ ಕೆ.ವಿ. ವಿಶ್ವನಾಥನ್ ನೇತೃತ್ವದ ಪೀಠ ಈ ಪ್ರಕರಣದಲ್ಲಿ ಕೆಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ.
ನಿರ್ದಿಷ್ಟ ಸಂದರ್ಭಗಳಲ್ಲಿ ಪ್ಯಾಸಿವ್ ಯೂಥನೇಷಿಯಾ ಅನುಮತಿಸಬಹುದು
ವೈದ್ಯಕೀಯ ಮಂಡಳಿಯ ಅನುಮತಿ ಮತ್ತು ಮೇಲ್ವಿಚಾರಣೆಯೊಂದಿಗೆ ಲೈಫ್ ಸಪೋರ್ಟ್ ಹಿಂತೆಗೆದುಕೊಳ್ಳಬಹುದು
,ಪ್ರಕ್ರಿಯೆ 2018ರ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ನಡೆಯಬೇಕು.

ರೋಗಿಯ ಗೌರವಯುತ ಅಂತಿಮ ಕ್ಷಣಗಳನ್ನು ಕಾಪಾಡುವುದು ಪ್ರಮುಖ ಉದ್ದೇಶ

ಪ್ಯಾಸಿವ್ ಯೂಥನೇಷಿಯಾ ಎಂದರೇನು?

ಪ್ಯಾಸಿವ್ ಯೂಥನೇಷಿಯಾ ಎಂದರೆ ರೋಗಿಯ ಜೀವನವನ್ನು ಕೃತಕವಾಗಿ ಮುಂದುವರಿಸುತ್ತಿರುವ

ವೆಂಟಿಲೇಟರ್
ಫೀಡಿಂಗ್ ಟ್ಯೂಬ್
ಇತರ ಜೀವಸಹಾಯಕ
ವೈದ್ಯಕೀಯ ಸಾಧನಗಳನ್ನು ಹಿಂತೆಗೆದುಕೊಳ್ಳುವುದು.ಇದು ರೋಗಿಯ ಮರಣವನ್ನು ನೇರವಾಗಿ ಉಂಟುಮಾಡುವುದಲ್ಲ; ಬದಲಿಗೆ ಪ್ರಕೃತಿಯ ಪ್ರಕ್ರಿಯೆ ನಡೆಯಲು ಅವಕಾಶ ನೀಡುವುದು.

ಈ ತೀರ್ಪು ಹಲವು ಕಾರಣಗಳಿಂದ ಪ್ರಮುಖವಾಗಿದೆ:

ಭಾರತದಲ್ಲಿ ಗೌರವಯುತ ಮರಣದ ಹಕ್ಕು ಕುರಿತು ಕಾನೂನು ಸ್ಪಷ್ಟತೆ ಹೆಚ್ಚಿಸಿದೆ
ಕುಟುಂಬ ಮತ್ತು ವೈದ್ಯರಿಗೆ ಜೀವನದ ಕೊನೆಯ ಹಂತದ ನಿರ್ಧಾರಗಳಲ್ಲಿ ಮಾರ್ಗದರ್ಶನ ನೀಡುತ್ತದೆ

ಪ್ಯಾಸಿವ್ ಯೂಥನೇಷಿಯಾ ಕುರಿತಾಗಿ ನ್ಯಾಯಾಂಗದ ಮಾನವೀಯ ನಿಲುವುವನ್ನು ತೋರಿಸುತ್ತದೆ

ಸುಪ್ರೀಂ ಕೋರ್ಟ್ ನೀಡಿದ ಈ ತೀರ್ಪು ವೈದ್ಯಕೀಯ ವಿಜ್ಞಾನ, ಕಾನೂನು ಮತ್ತು ಮಾನವೀಯ ಮೌಲ್ಯಗಳ ನಡುವೆ ಸಮತೋಲನ ಸಾಧಿಸಲು ಮಾಡಿದ ಮಹತ್ವದ ಪ್ರಯತ್ನವೆಂದು ಪರಿಗಣಿಸಲಾಗಿದೆ. ಗುಣಮುಖವಾಗುವ ಸಾಧ್ಯತೆ ಇಲ್ಲದ ಸಂದರ್ಭದಲ್ಲಿ ರೋಗಿಗೆ ಗೌರವಯುತ ಮತ್ತು ಶಾಂತಿಯುತ ಅಂತ್ಯ ದೊರಕುವ ಹಕ್ಕನ್ನು ನ್ಯಾಯಾಲಯ ಮತ್ತೊಮ್ಮೆ ಒತ್ತಿ ಹೇಳಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ