📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರತೆಯ ಬಗ್ಗೆ ಆಸ್ತಿಕ ವರ್ಗದಲ್ಲಿ ಸಾಕಷ್ಟು  ಗೌರವವಿದೆ. ಪ್ರತಿದಿನ ನೂರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮದೇ ಆದ ಸೇವಾ ಕೈಂಕರ್ಯಗಳನ್ನು ಪೂರೈಸಿ ವಾಪಸ್ ಆಗುತ್ತಿದ್ದಾರೆ. ಅಂತಹ ಕ್ಷೇತ್ರದಲ್ಲಿ ಆಡಳಿತ ಮಂಡಳಿಯು ಭಕ್ತರಿಗೆ ಕೊಡುತ್ತಿರುವ ಮೆಸೇಜು ಇಂದು  ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಇದು ಹಲವು ರೀತಿಯಲ್ಲಿ ಭಕ್ತರು ಹಾಗೂ ಅರ್ಚಕರಲ್ಲಿ ಗೊಂದಲಕ್ಕು ಕಾರಣವಾಗಿದೆ. ಈ ಗೊಂದಲವನ್ನು ಸ್ವತಹ ಇಲ್ಲಿನ ಆಡಳಿತ ಮಂಡಳಿಯೇ ಸೃಷ್ಟಿಸಿದೆ ಅನ್ನುವುದಂತೂ ಸತ್ಯ

    ಅಷ್ಟಕ್ಕೂ ಆಡಳಿತ ಮಂಡಳಿಯು ಸೃಷ್ಟಿಸಿದ ಗೊಂದಲವಾದರೂ ಎಂತಹುದು? ಸರ್ಪ ಸಂಸ್ಕಾರದ ಪೂಜೆಯನ್ನು ಭಕ್ತರು ಆನ್ಲೈನ್ನಲ್ಲಿ ಬುಕ್ ಮಾಡುತ್ತಾರೆ ಅಥವಾ ಬಂದ ತಕ್ಷಣವೇ ಚೀಟಿ ಬರೆಸುತ್ತಾರೆ. ಆಗಲೇ 4,200 ಹಣವನ್ನು ಪಾವತಿಸಿಕೊಳ್ಳುತ್ತಾರೆ. ಈ ಹಣದಲ್ಲಿ ಈ ಒಂದು ಪೂಜೆಯ ಎಲ್ಲಾ ವೆಚ್ಚಗಳು ಒಳಗೊಂಡಿರುತ್ತವೆ ಅನ್ನುವುದು ಆಡಳಿತ ಮಂಡಳಿಯ ಪ್ರಕಟಣೆಯಾಗಿದೆ. ಹಾಗಾಗಿ ಯಾವುದೇ ಭಕ್ತರು ಪೂಜೆಯ ಸಮಯದಲ್ಲಿ ಅಥವಾ ನಂತರ ಯಾವುದೇ ಸಂಭಾವನೆಯನ್ನು ಯಾರಿಗೂ ನೀಡಬೇಕಾಗಿಲ್ಲ. ಯಾವುದಾದರೂ ಪುರೋಹಿತರು ಡಿಮ್ಯಾಂಡ್ ಮಾಡಿದರೆ ತಕ್ಷಣವೇ ದೇವಸ್ಥಾನದ ಆಡಳಿತ ಕಚೇರಿಗೆ ಬಂದು ದೂರು ನೀಡಿ ಎನ್ನುವ ಸಂದೇಶವನ್ನು ಬಹಿರಂಗವಾಗಿ ವಿವಿಧ ಭಾಷೆಗಳಲ್ಲಿ ಬಿತ್ತರಿಸಲಾಗುತ್ತಿದೆ.

    ಅದರಿಂದ ಈಗ, ಭಕ್ತರು ಹಾಗೂ ಪುರೋಹಿತ ವರ್ಗ ಎರಡರಲ್ಲೂ ಗೊಂದಲ ವೇರ್ಪಟ್ಟಿದೆ. ಪ್ರತಿ ಸರ್ಪಸಂಸ್ಕಾರಕ್ಕೂ, ಅದನ್ನು ನಿರ್ವಹಿಸಿದ ಪುರೋಹಿತರಿಗೆ ಆಡಳಿತ ಮಂಡಳಿಯಿಂದಲೇ ಅವರ ಸಂಭಾವನೆ ಹೋಗುತ್ತದೆ. ಹಾಗೆಯೇ ಬ್ರಹ್ಮಚಾರಿಗೂ ಆಡಳಿತ ಮಂಡಳಿಯಿಂದಲೇ ಸಂಭಾವನೆ ಹೋಗುತ್ತದೆ. ಹಾಗಾಗಿ ಪುರೋಹಿತರಾಗಲಿ ಬ್ರಹ್ಮಚಾರಿಯಾಗಲಿ ಪೂಜಾ ಕರ್ತರಿಂದ ಹಣ ಕೇಳುವ ಹಾಗಿಲ್ಲ ಎನ್ನುವುದು ಆಡಳಿತ ಮಂಡಳಿಯ ಕಟ್ಟಪ್ಪಣೆ. ಇದು ಸರಿಯೂ ಹೌದು.

    ಆದರೆ ಇದು ಧಾರ್ಮಿಕ ಕಾರ್ಯಕ್ರಮ. ಇಲ್ಲಿ ಯಾವುದೇ ಭಕ್ತನು ತಾನು ಸಲ್ಲಿಸಿದ ಸೇವೆಯ ನಂತರ ಅರ್ಚಕರಿಗೆ ಸಂಭಾವನೆ ಕೊಟ್ಟು ಅವರಿಂದ ಮಂತ್ರಾಕ್ಷತೆಯನ್ನು ಪಡೆಯುವುದು ಧಾರ್ಮಿಕ ಪರಂಪರೆಯ ಭಾಗವಾಗಿದೆ. ಜೊತೆಗೆ ಹಸ್ತೋದಕದ ಮೂಲಕ ಊಟ ಬಡಿಸುವುದು ಕೂಡ ಅದರ ಭಾಗವಾಗಿರುತ್ತದೆ.

    ಆದ್ರೆ ಇದ್ಯಾವುದನ್ನು ಮಾಡಲಾಗದಿದ್ರೆ, ಸೇವೆ ಮಾಡಿಸುವಾತನಿಗೆ ಫಲ ಇಲ್ಲ ಅನ್ನುವ ತಿಳುವಳಿಕೆ ಹೊಂದಿದವರು ಇದ್ದಾರೆ. ಇದರಿಂದ ಇರುಸು ಮುರುಸು ಆಗುತ್ತದೆ. ಇದು ಭಕ್ತರರ ವಲಯದಲ್ಲಿರೋ ಗೊಂದಲ.

    ಒಟ್ಟಿನಲ್ಲಿ ಭಕ್ತರು ಮತ್ತು ಪುರೋಹಿತರು ಇಬ್ಬರವಲಯದಲ್ಲೂ ಈ ಗೊಂದಲ ಆಗಿದ್ದು ನಿಜ. ಆದ್ರಿಲ್ಲಿ ಪುರೋಹಿತರು ಒತ್ತಡ ಹೇರುವ ಹಾಗಿಲ್ಲ. ಡಿಮ್ಯಾಂಡ್ ಮಾಡುವ ಹಾಗಿಲ್ಲ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯೇ ಯೋಗ್ಯ ತೀರ್ಮಾನ ಕೈಗೊಳ್ಳಬೇಕು. ಭಕ್ತರ ಮನದಲ್ಲಿ ಯಾವುದೇ ಅಸoತೃಪ್ತಿಯ ಭಾವನೆ ಮೂಡದಂತೆ ನೋಡಿಕೊಳ್ಳಬೇಕು…..ಅದಕ್ಕಾಗಿ ಒಬ್ಬರನ್ನು ನೇಮಿಸಿಕೊಂಡು ಪೂಜಾ ಸ್ಥಳದಲ್ಲಿಯೇ ಪುರೋಹಿತರಿಗೆ ನೀಡುವ ದಕ್ಷಿಣೆ, ಬ್ರಾಹ್ಮಚಾರಿಗೆ ನೀಡುವ ದಕ್ಷಿಣೆಯನ್ನು ಭಕ್ತರ ಕೈನಿಂದಲೇ ನೀಡಿಸಿದರೆ ಒಳ್ಳೆಯದು ಅನ್ನುವುದು ಅನೇಕ ಹಿರಿಯರ ಅನಿಸಿಕೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!