📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರತೆಯ ಬಗ್ಗೆ ಆಸ್ತಿಕ ವರ್ಗದಲ್ಲಿ ಸಾಕಷ್ಟು  ಗೌರವವಿದೆ. ಪ್ರತಿದಿನ ನೂರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮದೇ ಆದ ಸೇವಾ ಕೈಂಕರ್ಯಗಳನ್ನು ಪೂರೈಸಿ ವಾಪಸ್ ಆಗುತ್ತಿದ್ದಾರೆ. ಅಂತಹ ಕ್ಷೇತ್ರದಲ್ಲಿ ಆಡಳಿತ ಮಂಡಳಿಯು ಭಕ್ತರಿಗೆ ಕೊಡುತ್ತಿರುವ ಮೆಸೇಜು ಇಂದು  ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಇದು ಹಲವು ರೀತಿಯಲ್ಲಿ ಭಕ್ತರು ಹಾಗೂ ಅರ್ಚಕರಲ್ಲಿ ಗೊಂದಲಕ್ಕು ಕಾರಣವಾಗಿದೆ. ಈ ಗೊಂದಲವನ್ನು ಸ್ವತಹ ಇಲ್ಲಿನ ಆಡಳಿತ ಮಂಡಳಿಯೇ ಸೃಷ್ಟಿಸಿದೆ ಅನ್ನುವುದಂತೂ ಸತ್ಯ

ಅಷ್ಟಕ್ಕೂ ಆಡಳಿತ ಮಂಡಳಿಯು ಸೃಷ್ಟಿಸಿದ ಗೊಂದಲವಾದರೂ ಎಂತಹುದು? ಸರ್ಪ ಸಂಸ್ಕಾರದ ಪೂಜೆಯನ್ನು ಭಕ್ತರು ಆನ್ಲೈನ್ನಲ್ಲಿ ಬುಕ್ ಮಾಡುತ್ತಾರೆ ಅಥವಾ ಬಂದ ತಕ್ಷಣವೇ ಚೀಟಿ ಬರೆಸುತ್ತಾರೆ. ಆಗಲೇ 4,200 ಹಣವನ್ನು ಪಾವತಿಸಿಕೊಳ್ಳುತ್ತಾರೆ. ಈ ಹಣದಲ್ಲಿ ಈ ಒಂದು ಪೂಜೆಯ ಎಲ್ಲಾ ವೆಚ್ಚಗಳು ಒಳಗೊಂಡಿರುತ್ತವೆ ಅನ್ನುವುದು ಆಡಳಿತ ಮಂಡಳಿಯ ಪ್ರಕಟಣೆಯಾಗಿದೆ. ಹಾಗಾಗಿ ಯಾವುದೇ ಭಕ್ತರು ಪೂಜೆಯ ಸಮಯದಲ್ಲಿ ಅಥವಾ ನಂತರ ಯಾವುದೇ ಸಂಭಾವನೆಯನ್ನು ಯಾರಿಗೂ ನೀಡಬೇಕಾಗಿಲ್ಲ. ಯಾವುದಾದರೂ ಪುರೋಹಿತರು ಡಿಮ್ಯಾಂಡ್ ಮಾಡಿದರೆ ತಕ್ಷಣವೇ ದೇವಸ್ಥಾನದ ಆಡಳಿತ ಕಚೇರಿಗೆ ಬಂದು ದೂರು ನೀಡಿ ಎನ್ನುವ ಸಂದೇಶವನ್ನು ಬಹಿರಂಗವಾಗಿ ವಿವಿಧ ಭಾಷೆಗಳಲ್ಲಿ ಬಿತ್ತರಿಸಲಾಗುತ್ತಿದೆ.

ಅದರಿಂದ ಈಗ, ಭಕ್ತರು ಹಾಗೂ ಪುರೋಹಿತ ವರ್ಗ ಎರಡರಲ್ಲೂ ಗೊಂದಲ ವೇರ್ಪಟ್ಟಿದೆ. ಪ್ರತಿ ಸರ್ಪಸಂಸ್ಕಾರಕ್ಕೂ, ಅದನ್ನು ನಿರ್ವಹಿಸಿದ ಪುರೋಹಿತರಿಗೆ ಆಡಳಿತ ಮಂಡಳಿಯಿಂದಲೇ ಅವರ ಸಂಭಾವನೆ ಹೋಗುತ್ತದೆ. ಹಾಗೆಯೇ ಬ್ರಹ್ಮಚಾರಿಗೂ ಆಡಳಿತ ಮಂಡಳಿಯಿಂದಲೇ ಸಂಭಾವನೆ ಹೋಗುತ್ತದೆ. ಹಾಗಾಗಿ ಪುರೋಹಿತರಾಗಲಿ ಬ್ರಹ್ಮಚಾರಿಯಾಗಲಿ ಪೂಜಾ ಕರ್ತರಿಂದ ಹಣ ಕೇಳುವ ಹಾಗಿಲ್ಲ ಎನ್ನುವುದು ಆಡಳಿತ ಮಂಡಳಿಯ ಕಟ್ಟಪ್ಪಣೆ. ಇದು ಸರಿಯೂ ಹೌದು.

ಆದರೆ ಇದು ಧಾರ್ಮಿಕ ಕಾರ್ಯಕ್ರಮ. ಇಲ್ಲಿ ಯಾವುದೇ ಭಕ್ತನು ತಾನು ಸಲ್ಲಿಸಿದ ಸೇವೆಯ ನಂತರ ಅರ್ಚಕರಿಗೆ ಸಂಭಾವನೆ ಕೊಟ್ಟು ಅವರಿಂದ ಮಂತ್ರಾಕ್ಷತೆಯನ್ನು ಪಡೆಯುವುದು ಧಾರ್ಮಿಕ ಪರಂಪರೆಯ ಭಾಗವಾಗಿದೆ. ಜೊತೆಗೆ ಹಸ್ತೋದಕದ ಮೂಲಕ ಊಟ ಬಡಿಸುವುದು ಕೂಡ ಅದರ ಭಾಗವಾಗಿರುತ್ತದೆ.

ಆದ್ರೆ ಇದ್ಯಾವುದನ್ನು ಮಾಡಲಾಗದಿದ್ರೆ, ಸೇವೆ ಮಾಡಿಸುವಾತನಿಗೆ ಫಲ ಇಲ್ಲ ಅನ್ನುವ ತಿಳುವಳಿಕೆ ಹೊಂದಿದವರು ಇದ್ದಾರೆ. ಇದರಿಂದ ಇರುಸು ಮುರುಸು ಆಗುತ್ತದೆ. ಇದು ಭಕ್ತರರ ವಲಯದಲ್ಲಿರೋ ಗೊಂದಲ.

ಒಟ್ಟಿನಲ್ಲಿ ಭಕ್ತರು ಮತ್ತು ಪುರೋಹಿತರು ಇಬ್ಬರವಲಯದಲ್ಲೂ ಈ ಗೊಂದಲ ಆಗಿದ್ದು ನಿಜ. ಆದ್ರಿಲ್ಲಿ ಪುರೋಹಿತರು ಒತ್ತಡ ಹೇರುವ ಹಾಗಿಲ್ಲ. ಡಿಮ್ಯಾಂಡ್ ಮಾಡುವ ಹಾಗಿಲ್ಲ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯೇ ಯೋಗ್ಯ ತೀರ್ಮಾನ ಕೈಗೊಳ್ಳಬೇಕು. ಭಕ್ತರ ಮನದಲ್ಲಿ ಯಾವುದೇ ಅಸoತೃಪ್ತಿಯ ಭಾವನೆ ಮೂಡದಂತೆ ನೋಡಿಕೊಳ್ಳಬೇಕು…..ಅದಕ್ಕಾಗಿ ಒಬ್ಬರನ್ನು ನೇಮಿಸಿಕೊಂಡು ಪೂಜಾ ಸ್ಥಳದಲ್ಲಿಯೇ ಪುರೋಹಿತರಿಗೆ ನೀಡುವ ದಕ್ಷಿಣೆ, ಬ್ರಾಹ್ಮಚಾರಿಗೆ ನೀಡುವ ದಕ್ಷಿಣೆಯನ್ನು ಭಕ್ತರ ಕೈನಿಂದಲೇ ನೀಡಿಸಿದರೆ ಒಳ್ಳೆಯದು ಅನ್ನುವುದು ಅನೇಕ ಹಿರಿಯರ ಅನಿಸಿಕೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
“ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
“ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!