📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!

ಉಡುಪಿ, ಜುಲೈ 2026: ವಂಚನೆ, ಹನಿ ಟ್ರ್ಯಾಪ್ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಜೀನತ್ ಎಂಬ ಮಹಿಳೆಯನ್ನು ಬಂಧಿಸಿರುವುದು ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಂಧನದಿಂದ ಉಡುಪಿಯ ಹಲವು ಉದ್ಯಮಿಗಳು ಮತ್ತು ಪುಡಿ ರಾಜಕಾರಣಿಗಳಲ್ಲಿ ಆತಂಕ ಮೂಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ
ದೂರುದಾರ ವಿಜಯ್ ನೀಡಿದ ದೂರಿನ ಅನ್ವಯ ಜೀನತ್ ವಿರುದ್ಧ ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿ ಬಂಧನವಾಗಿದೆ. ಬಂಧಿತೆಯ ಬಳಿ ಮತ್ತು ದೂರುದಾರರ ಬಳಿ ಕೆಲವು “ಸೀಕ್ರೆಟ್ ಎವಿಡೆನ್ಸ್”ಗಳಿದ್ದು ಅವನು ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಏನಿದೆ ಆ ಸೀಕ್ರೆಟ್?
ಬಂಧನದ ಬಳಿಕ ಆಡಿಯೋ ರೆಕಾರ್ಡ್‌ಗಳು, ವಿಡಿಯೋ ಮತ್ತು ಫೋಟೋಗಳು ಸೇರಿದಂತೆ ಹಲವು ದಾಖಲೆಗಳು ಪೊಲೀಸರ ಪರಿಶೀಲನೆಗೆ ಒಳಗಾಗಿವೆ ಎಂಬ ಮಾಹಿತಿ ಇದೆ. ಈ ದಾಖಲೆಗಳ ಆಧಾರದ ಮೇಲೆ ಉಡುಪಿಯ ಹಲವು ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಹಾಕಲಾಗುತ್ತಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಹಲವರನ್ನು ಈ ಒಂದು ಇಟ್ಟುಕೊಂಡು ಜೀನತ್ ತನ್ನ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಳು ಎಂಬ ಅನುಮಾನವೂ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ರಾಜಕೀಯ ಒತ್ತಡದ ಆರೋಪ
ಒಂದು ಮೂಲದ ಪ್ರಕಾರ, ಜೀನತ್‌ನ ಬಳಿಯಿರುವ ಎಲ್ಲಾ ಎವಿಡೆನ್ಸ್‌ಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಹಿರಿಯ ರಾಜಕಾರಣಿಯೊಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದಾಗ್ಯೂ ಈ ಬಗ್ಗೆ ಪೊಲೀಸರಿಂದ ಅಧಿಕೃತ ದೃಢೀಕರಣ ಬಂದಿಲ್ಲ.

ಸಂಘದ ಹುದ್ದೆ
ಬಂಧಿತ ಜೀನತ್ ಇತ್ತೀಚೆಗಷ್ಟೇ ಪ್ರತಿಷ್ಠಿತ ಸೀನಿಯರ್ ಚೇಂಬರ್ಸ್ ಉಡುಪಿಯ ಅಧ್ಯಕ್ಷ ಸ್ಥಾನವನ್ನು ಇನ್ನೊಬ್ಬರಿಗೆ ಹಸ್ತಾಂತರಿಸಿದ್ದಾರೆ. ಆ ಸಂಬಂಧಿತ ದಾಖಲೆಗಳೂ ತನಿಖೆಯ ವ್ಯಾಪ್ತಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಕ್ರಮ
ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಂಧಿತೆಯ ಮೊಬೈಲ್, ಪೆನ್ ಡ್ರೈವ್ ಮತ್ತು ಇತರ ಡಿಜಿಟಲ್ ಸಾಧನಗಳನ್ನು ಪರಿಶೀಲಿಸಲಾಗುತ್ತಿದೆ. ಹೆಚ್ಚಿನ ವಿವರಗಳು ತನಿಖೆಯ ಬಳಿಕವಷ್ಟೇ ಹೊರಬರಲಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಂಧನಕ್ಕೆ ಸಂಬಂಧಿಸಿದಂತೆ ಉಡುಪಿಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಪೊಲೀಸರ ಕ್ರಮಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ…. ಈ ಬಗ್ಗೆ ಸವಿವರವಾದ ವಿಚಾರವನ್ನು ಮಾತ್ರ ಸಂಸ್ಥೆಯಾದ ಕರಾವಳಿ ಮಾರುತದಲ್ಲಿ ಸಚಿತ್ರ ವರದಿ ಪ್ರಕಟಿಸಲಾಗುವುದು.

ವರದಿ: ಉಡುಪಿ ಅಪರಾಧ ಪತ್ರಿಕೋದ್ಯಮ ವಿಭಾಗ

COMMENTS

Login with Gmail to comment

ಇನ್ನಷ್ಟು ಸುದ್ದಿ

ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
KGF, ಕಾಂತಾರ ಬ್ಯಾನರ್‌ನಲ್ಲಿ ಕಾಲಿವುಡ್ ‘ಜೈ ಭೀಮ್’..!ಹೊಂಬಾಳೆ ಜೊತೆ ಕೈಜೋಡಿಸಿದ ಸೂರ್ಯ, ಬಾಕ್ಸ್ ಆಫೀಸ್ ಧೂಳೀಪಟ ಖಚಿತ!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
“ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ