📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 

ಹಳಿಯಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ವಿ ದೇಶಪಾಂಡೆ ಅವರ ವಿರುದ್ಧ ಜನಾಕ್ರೋಶ ಏರ್ಪಡುತ್ತಿದೆ.

ರೈತರಿಗೆ ನೀರಿನ ಸಮಸ್ಯೆ ವಿಪರೀತವಾಗಿ ಕಾಡಲಾರಂಭಿಸಿರುವುದರಿಂದಾಗಿ 9 ಬಾರಿ ಈ ಕ್ಷೇತ್ರವನ್ನು ಆಳಿದ ಆರ್ ವಿ ದೇಶಪಾಂಡೆ ವಿರುದ್ಧ ಜನರ ಆಕ್ರೋಶ ಹುಟ್ಟಿಕೊಂಡಿದೆ. ಅದರ ಪರಿಣಾಮ ಯುವ ನಾಯಕ ಕುಮಾರ್ ಬೊಬಟಿ ನೇತೃತ್ವದಲ್ಲಿ ಮಾರ್ಚ್ 16ರಂದು ಬೃಹತ್ ಪ್ರತಿಭಟನೆಗೆ ಹಳಿಯಾಳ ಸಜ್ಜಾಗುತ್ತಿದೆ.

ರೈತರು, ನೀರಿನ ಸಮಸ್ಯೆಯಿಂದಾಗಿ ಕೃಷಿ ಕಾರ್ಯಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೇ ಕಿಲೋಮೀಟರ್ ದೂರದಲ್ಲಿ ದಾಂಡೇಲಿ ಇದೆ. ಅಲ್ಲಿನಿಂದ ನೀರನ್ನು ಹಳಿಯಾಳದ ಸುತ್ತಮುತ್ತಲಿನ ಕೃಷಿ ಚಟುವಟಿಕೆಗಾಗಿ ತರುವಂತಹ  ಕೆಲಸವನ್ನು ಮಾಡಬಹುದಿತ್ತು. ಅದ್ಯಾವುದನ್ನು ಮಾಡದೆ, ಕೇವಲ ಶೋ ರಾಜಕಾರಣ ಮಾಡಿಕೊಂಡಿದ್ದಾರೆ. ಈ ತರಹದ ನಡವಳಿಕೆ ಇನ್ನು ನಡೆಯುವುದಿಲ್ಲ . ಹಳಿಯಾಳದ ರೈತರಿಗೆ ನೀರು ಬೇಕು. ಅದನ್ನು ಕೊಡಲಾಗದಿದ್ದರೆ ಮೊದಲು ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಖಡಕ್ಕಾಗಿ ಕುಮಾರ್ ಬೊಬಾಟೆ ತಾಕೀತು ಮಾಡಿದ್ದಾರೆ.

ಯುವ ರೈತನಾಯಕ ಹಳಿಯಾಳದ ರೈತ ಮುಖಂಡರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮಾರ್ಚ್ 16ರಂದು ನೀರಿಗಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಶೋ ರಾಜಕಾರಣವನ್ನು ಇಲ್ಲಿಗೆ ನಿಲ್ಲಿಸಿ ದೇಶಪಾಂಡೆ ಅವರೇ, ನಾವು ರೈತರು ಆಕ್ರೋಶಗೊಳ್ಳದಂತೆ ನೋಡಿಕೊಳ್ಳಿ. ರಕ್ತ ಕ್ರಾಂತಿಗೆ ಅವಕಾಶ ಮಾಡಿಕೊಡಬೇಡಿ. ನಿಮ್ಮಲ್ಲಿ ಕೆಲಸ ಮಾಡಲು ಆಗದಿದ್ದರೆ ಸೈಲೆಂಟಾಗಿ ರಾಜೀನಾಮೆ ಕೊಟ್ಟು ಮನೆಗೆ ಹೋಗಿಬಿಡಿ ಅದು ಬಿಟ್ಟು ಕೆಲಸ ಮಾಡದೆ ಆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಇನ್ನು ನಾವಂತೂ ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಕುಮಾರ್ ಬೊಬಾಟೆ, ಶಾಸಕ ಆರ್ ವಿ ದೇಶಪಾಂಡೆ ಅವರಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನೂರಾರು ರೈತ ಮುಖಂಡರುಗಳು ಉಪಸ್ಥಿತರಿದ್ದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಡಾನ್ -3 ಸಿನಿಮಾ ಕಥೆ ಗೋವಿಂದ….!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
“ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ