📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.

ಮಂಗಳೂರು: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವು ಶಿಕ್ಷಣ ಕ್ಷೇತ್ರದಲ್ಲಿ ಅನಗತ್ಯ ಗೊಂದಲ ಮತ್ತು ವಿಭಜನೆ ಸೃಷ್ಟಿಸುವಂತದ್ದು ಎಂದು ಅವರು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, “ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿದೆ. ಇದು ಕಾಂಗ್ರೆಸ್‌ನ ಮುಸ್ಲಿಂ ತುಷ್ಠೀಕರಣದ ಪರಮಾವಧಿ ಹಾಗೂ ನ್ಯಾಯಾಲಯದ ಆದೇಶದ ಉಲ್ಲಂಘನೆ” ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತನ್ನ ರಾಜಕೀಯ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ಮುಸ್ಲಿಂ ಸಮುದಾಯವನ್ನು ಸಮಾಧಾನಪಡಿಸಲು ಶಿಕ್ಷಣ ಕ್ಷೇತ್ರವನ್ನು ಬಳಸುತ್ತಿದೆ ಎಂದು ಅವರು ಟೀಕಿಸಿದರು. “ಶಿಕ್ಷಣ ಸಚಿವರು ದಿಕ್ಕುತೋಚದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಸರ್ಕಾರ ತಕ್ಷಣ ಹಿಜಾಬ್ ಕುರಿತ ಆದೇಶವನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಡಾ. ಭರತ್ ಶೆಟ್ಟಿ, “ಮಕ್ಕಳಲ್ಲಿ ಸಮಾನತೆ ಮೂಡಿಸಬೇಕಾದ ಶಾಲಾ-ಕಾಲೇಜುಗಳಲ್ಲೂ ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣದ ಮೂಲಕ ಭಿನ್ನಾಭಿಪ್ರಾಯ ಬಿತ್ತುತ್ತಿದೆ” ಎಂದು ಕಿಡಿಕಾರಿದರು.

“ಹಿಂದಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಲ್ಲಿ ಜಾತಿ-ಮತದ ಭೇದ ತೊಡೆದು ಒಗ್ಗಟ್ಟಿನ ಭಾವನೆ ಬೆಳೆಯಲೆಂದು ಕಟ್ಟುನಿಟ್ಟಿನ ಸಮವಸ್ತ್ರ ನಿಯಮ ಜಾರಿಗೊಳಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಹಿಂಪಡೆದು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ” ಎಂದು ಅವರು ಹೇಳಿದರು.

ಹಿಜಾಬ್ ವಿವಾದ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗದಿರುವಾಗಲೇ ಸರ್ಕಾರ ನಿಷೇಧ ಹಿಂಪಡೆದಿರುವುದು ನ್ಯಾಯಾಂಗ ವ್ಯವಸ್ಥೆಗೆ ಅವಮಾನವಾಗಿದೆ ಎಂದು ಅವರು ಆರೋಪಿಸಿದರು. “ದೇಶದ ಏಕತೆಗೆ ಹಾನಿ ಮಾಡುವ ರೀತಿಯಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ನಡೆಸುತ್ತಿದೆ” ಎಂದು ಟೀಕಿಸಿದರು.

ಶಾಸಕ ವೇದವ್ಯಾಸ ಕಾಮತ್ ಅವರು ಸಹ ಸರ್ಕಾರದ ಕ್ರಮವನ್ನು ಖಂಡಿಸಿ, “ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಏಕತೆ ತರುವ ಉದ್ದೇಶದಿಂದ ಜಾರಿಗೊಳಿಸಿದ್ದ ಸಮವಸ್ತ್ರ ನಿಯಮವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದು ಶಿಕ್ಷಣದ ವಾತಾವರಣ ಹಾಳುಗೆಡವಲು ಮುಂದಾಗಿದೆ” ಎಂದು ಹೇಳಿದರು.

“ಸಮವಸ್ತ್ರದ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಜಾತಿ-ಮತ ಭೇದ ಮರೆಸಿ ಸಮಾನತೆಯ ಭಾವ ಮೂಡಿಸುವುದು. ಆದರೆ ಓಲೈಕೆ ರಾಜಕಾರಣಕ್ಕಾಗಿ ಸರ್ಕಾರವೇ ವಿದ್ಯಾರ್ಥಿಗಳನ್ನು ಧರ್ಮದ ಆಧಾರದ ಮೇಲೆ ವಿಭಜಿಸುತ್ತಿದೆ” ಎಂದು ಆರೋಪಿಸಿದರು.

ಹಿಜಾಬ್ ವಿವಾದ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ನಿಷೇಧ ಹಿಂಪಡೆದಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಹೇಳಿದ ಅವರು, “ರಾಜ್ಯದಲ್ಲಿ ಶಿಕ್ಷಕರ ಕೊರತೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮುಂತಾದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವ ಬದಲು ಸರ್ಕಾರ ವಿದ್ಯಾರ್ಥಿಗಳಲ್ಲಿ ಪ್ರತ್ಯೇಕತೆ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”