📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ

ಎರಡು ದಿನದ ಹಿಂದಷ್ಟೇ ಕರ್ನಾಟಕ ರಾಜ್ಯದ ನೂತನ ಸರ್ಕಾರದ ಭಾಗವಾಗಿ ಪ್ರಮಾಣವಚನ ಸ್ವೀಕರಿಸಿದ್ದ ಹಿರಿಯ ಶಾಸಕ ರಾಮಲಿಂಗ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೂತನ ಸರ್ಕಾರದ ಆರಂಭದಲ್ಲೇ ಮರ್ಮಘಾತ ನೀಡಿದ್ದಾರೆ.

ತಮಗೆ ಕೊಟ್ಟ ಖಾತೆಯ ಬಗ್ಗೆ ಅಸಮಾಧಾನ ಹೊಂದಿರುವ ರಾಮಲಿಂಗ ರೆಡ್ಡಿ, ನೂತನ ಸರ್ಕಾರವನ್ನು ತನ್ನ ಅಣತಿಯಂತೆ ಕುಣಿಸಲು ಹೋಗಿ ಅದು ಸಾಧ್ಯವಾಗದಿದ್ದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ಸಚಿವ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿ, ಅತ್ಯಂತ ಕನಿಷ್ಠ ಕೆಲಸವನ್ನು ಮಾಡಿದ ಕೀರ್ತಿಯನ್ನು ಹೊಂದಿರುವ ರಾಮಲಿಂಗ ರೆಡ್ಡಿ ಅವರು, ನೂತನ ಸರ್ಕಾರದಲ್ಲಿ ಪ್ರತಿಷ್ಠಿತ ಖಾತೆಗಾಗಿ ಲಾಬಿ ನಡೆಸಲು ಹೋಗಿ ಎಡವಿ ಬಿದ್ದಿದ್ದಾರೆ ಎನ್ನುವುದು ಈ ಕ್ಷಣದ ಮಾಹಿತಿಯಾಗಿದೆ.

ಈ ಬಾರಿಯ ಸಚಿವ ಸಂಪುಟದಲ್ಲಿ ರಾಮಲಿಂಗ ರೆಡ್ಡಿಯೂ ಸೇರಿದಂತೆ ಈಗ ಸಚಿವರಾಗಿರುವ ಕೆಲವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇರಲಿಲ್ಲ. ಯುವ ಹಾಗೂ ಹೊಸ ಮುಖಗಳನ್ನು ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿಕೊಂಡು ಆಡಳಿತಯಂತ್ರಕ್ಕೆ ಚುರುಕು ನೀಡುವ ಯೋಜನೆ ಹಾಕಿಕೊಂಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ, ಕೆಲವು ಹಳೆ ಮುಖಗಳನ್ನು ಅನಿವಾರ್ಯವಾಗಿ ತೆಗೆದುಕೊಳ್ಳುವಂತಹ ಪರಿಸ್ಥಿತಿ ಬಂದಿತ್ತಂತೆ. ಆ ಅನಿವಾರ್ಯತೆಯ ಮುಖದಲ್ಲಿ ಇದ್ದ ಹೆಸರು ರಾಮಲಿಂಗ ರೆಡ್ಡಿ ಅವರದ್ದು ಒಂದು. ಮಾಜಿ ಮುಖ್ಯಮಂತ್ರಿ ಅವರ ಬೇಡಿಕೆಯಂತೆ ಅವರನ್ನೆಲ್ಲ ಸಂಪುಟಕ್ಕೆ ಸೇರಿಸಿಕೊಳ್ಳಬೇಕಾಯಿತು ಅನ್ನಲಾಗುತ್ತಿದೆ.

ಹಾಗೆ ಸೇರಿಸಿಕೊಂಡ ಪರಿಣಾಮವೇ ಈಗ ಸರ್ಕಾರವು ಮುಜುಗರ ಅನುಭವಿಸುವಂಥಾಗುತ್ತಿದೆ ಎನ್ನುವುದು ಮುಖ್ಯಮಂತ್ರಿಗಳ ಆಪ್ತರ ದೂರು. ಈ ದೂರ ಈಗ ಹೈಕಮಾಂಡ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲ, ರಾಮಲಿಂಗ ರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪಕ್ಷವು ಮುನ್ನುಗ್ಗಬಹುದು ಎನ್ನಲಾಗುತ್ತಿದೆ.

ಒಬ್ಬ ಹಿರಿಯ ಶಾಸಕರಾಗಿ ಈ ರೀತಿಯ ಹುಡುಗಾಟಿಕೆಯ ನಡೆಯನ್ನು ಪ್ರದರ್ಶಿಸಿದ್ದು, ಅವರಿಗೆ ಶೋಭೆ ತರುವ ರೀತಿಯಲ್ಲಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…