📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…

ಇತ್ತೀಚೆಗಿನ ದಿನದಲ್ಲಿ ನಡೆಯುತ್ತಿರುವ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಹೆಣ್ಣು ಮಕ್ಕಳ ಪಾತ್ರ ಪ್ರಮುಖವಾಗಿ ಕಂಡುಬರುತ್ತದೆ. ಯಾವ ಮಟ್ಟಕ್ಕೂ ಇಳಿಯಬಲ್ಲರು ಅನ್ನುವುದನ್ನು ಅವರ ವರ್ತನೆಯು ಪ್ರೂವ್ ಮಾಡುತ್ತಿದೆ. ಅಂತಹುದೇ ಒಂದು ಪ್ರಕರಣವು ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿದೆ ನೋಡಿ.
2016ರಲ್ಲಿ ಹರಿಯಾಣದ ಕೌಶಂಬಿ ಜಿಲ್ಲೆಯ ಮಹಾ ವಾಗತ್ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ವಾರ ಗ್ರಾಮದ ನಿವಾಸಿ ರಾಜು ತಿವಾರಿ ಎಂಬವರ ಜೊತೆಗೆ ಸದರ್ ಕೊತ್ವಾಲಿಯ ತೇವಾಂ ಗ್ರಾಮದ ಅಂಕಿತ ಶರ್ಮ ವಿವಾಹವು ಅದ್ದೂರಿಯಾಗಿ ನಡೆಯುತ್ತದೆ. ರಾಜು ತಿವಾರಿಯನ್ನು ಮದುವೆಯಾದ ಅಂಕಿತ ಶರ್ಮ, ತಿವಾರಿ ಮನೆಯ ಸೊಸೆಯಾಗಿ ಉತ್ತಮ ಹೆಸರನ್ನು ಸಂಪಾದಿಸಲಿಲ್ಲ. ಈ ಕಾರಣದಿಂದಾಗಿ ಕುಟುಂಬದಲ್ಲಿ ಒಂದಷ್ಟು ಗೊಂದಲಗಳು ಇದ್ದವು . ಅಷ್ಟೇ ಅಲ್ಲ, ಅಂಕಿತ ಶರ್ಮ ನಡತೆ ತೀವ್ರ ಚರ್ಚೆಗೂ ಕಾರಣವಾಗಿತ್ತು. ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಅಂಕಿತ್ ಶರ್ಮ, ಈ ಸಂದರ್ಭದಲ್ಲಿ ಇನ್ನೊಬ್ಬನ ಜೊತೆಗೆ ಸರಸವಾಡುತ್ತಿದ್ದಳು. ಈ ವಿಚಾರವಾಗಿ ರಾಜು ತಿವಾರಿ ಮನನೊಂದಿದ್ದ. ಅಂಕಿತ್ ಶರ್ಮಾ ತಂದೆ ತಾಯಿಯರಿಗೂ ತಿಳುವಳಿಕೆ ಹೇಳಲು ಹೇಳಿದ್ದರು ಪರಿಣಾಮ ಶೂನ್ಯವಾಗಿತ್ತು.
2024ರಲ್ಲಿ ಈ ಅಂಕಿತ್ ಶರ್ಮ, ಸ್ವತಃ ತನ್ನ ಚಿಕ್ಕಮ್ಮನ ಮಗ ರಾಮ್ ಆಲಿಯಾಸ್ ಸಂಕಲ್ಪ ಮಿಶ್ರ ಜೊತೆಗೆ ಓಡಿ ಹೋಗಿದ್ದಳು. ಈ ಸಂದರ್ಭದಲ್ಲಿ ಪಂಚಾಯಿತಿಗೆ ನಡೆದು ಎರಡು ಕುಟುಂಬದ ಹಿರಿಯರು ಮಾತನಾಡಿ ಇನ್ನು ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ ಎಂದು ಅಂಕಿತ್ ಶರ್ಮ ಕ್ಷಮೆ ಕೋರಿದ ನಂತರ ಅವತ್ತಿನ ಪ್ರಕರಣ ಸುಖಾಂತ್ಯವಾಗಿತ್ತು.
ಆದರೆ, ಇದೇ 2026ರ ಜನವರಿ 21ರಂದು ಅಂಕಿತ್ ಶರ್ಮ ಮನೆಯಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಪರಾರಿಯಾಗುತ್ತಾಳೆ. ಹಾಗೆ ಪರಾರಿಯಾದ ವಿಚಾರದಲ್ಲಿ ರಾಜು ತಿವಾರಿ ಮಹಾ ವಾಗತ್ ಪೊಲೀಸ್ ಠಾಣೆಯಲ್ಲಿ ಹೆಂಡತಿ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಿಸಿರುತ್ತಾರೆ.
ಯಾವಾಗ ಅಂಕಿತ್ ಶರ್ಮ ಕಾಣೆಯಾಗಿದ್ದಾಳೆ ಎನ್ನುವುದು ಗೊತ್ತಾಗುತ್ತದೆಯೋ, ಆಗ ಅಂಕಿತ್ ಶರ್ಮಾ ತಂದೆ ಸಹಿತ ಕೆಲವರು ಬಂದು ರಾಜು ತಿವಾರಿಯ ಮೇಲೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ಇದರಿಂದಾಗಿ ರಾಜು ತಿವಾರಿ ಜೈಲು ಪಾಲಾಗುತ್ತಾರೆ. ಕಳೆದ ಜನವರಿಯಲ್ಲಿ ಜೈಲು ಪಾಲಾದ ರಾಜು ತಿವಾರಿಗೆ, ಈಗ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಬಂದಿದೆ. ಅಂಕಿತ ಶರ್ಮಾ ಹಾಗೂ ಆತನ ಪ್ರಿಯಕರ ಮತ್ತು ಅವಳ ತಂದೆಯು ಸೇರಿದಂತೆ ನಾಲ್ಕು ಜನರ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ ಮತ್ತು ಜೈಲಿನ ಹೊಳಕ್ಕೆ ಹೋಗಿದ್ದಾರೆ.
ಅಷ್ಟಕ್ಕೂ ಆಗಿದ್ದೇನು ಗೊತ್ತಾ?
ಅಂಕಿತ್ ಶರ್ಮಾ ಜನವರಿ 21ರಂದು ಒಡವೆ ಹಾಗೂ ಹಣದೊಂದಿಗೆ ಅದೇ ತನ್ನ ಚಿಕ್ಕಮ್ಮನ ಮಗ ಸಂಕಲ್ಪ ಮಿಶ್ರ ಜೊತೆ ದೆಹಲಿಗೆ ಪರಾರಿ ಯಾಗುತ್ತಾಳೆ. ಇತ್ತ ಈ ವಿಚಾರ ಅವಳ ತಂದೆಗೆ ಗೊತ್ತಿದ್ದರೂ ಸಹ, ಅವರು ರಾಜು ತಿವಾರಿಯ ಮೇಲೆ ವರದಕ್ಷಿಣೆ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ರಾಜು ತಿವಾರಿ ಜೈಲಿಗೆ ಹೋಗುತ್ತಿದ್ದಂತೆಯೇ ಅಂಕಿತ್ ಶರ್ಮ ಸಂಕಲ್ಪ ಶರ್ಮನ ಜೊತೆ ದೆಹಲಿಯಲ್ಲಿ ಬಿಂದಾಸಾಗಿ ಎಂಜಾಯ್ ಮಾಡುತ್ತಿದ್ದಲು. ಈ ಒಂದು ವಿಚಾರ ಕೌಶಂಬಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅನಾಮಧೇಯ ವ್ಯಕ್ತಿಯಿಂದ ತಿಳಿದು ಬರುತ್ತದೆ. ಆ ಒಂದು ಮೆಸೇಜಿನ ಆಧಾರದ ಮೇಲೆ ಮಹಾವಾಗ ಪೊಲೀಸ್ ಠಾಣೆಯ ಪೊಲೀಸರು ದೆಹಲಿಯಲ್ಲಿ, ಸಕತ್ತಾಗಿ ಎಂಜಾಯ್ ಮಾಡುತ್ತಿದ್ದ ಅಂಕಿತ್ ಶರ್ಮಾ ಮನೆಯ ಬಾಗಿಲನ್ನು ಬಡಿಯುತ್ತಾರೆ. ಎದುರುಗಡೆ ಪೊಲೀಸರನ್ನು ಕಾಣುತ್ತಿದ್ದಂತೆಯೇ ಅಂಕಿತ್ ಶರ್ಮ ನಡುಗಿ ಹೋಗುತ್ತಾಳೆ. ತನ್ನ ಜೊತೆಗೆ ಕರೆದು ತಂದಿದ್ದ ಸಂಕಲ್ಪ ಶರ್ಮ, ತಪ್ಪಿಸಿಕೊಳ್ಳಲು ಹೆಣಗಾಡಿದರು ಪೊಲೀಸರು ಬಿಡಲಿಲ್ಲ. ಅವರಿಬ್ಬರನ್ನು ಹೆಡೆಮರಿ ಕಟ್ಟಿ ಹರಿಯಾಣಕ್ಕೆ ಕರೆದೊಯ್ದಿದ್ದಾರೆ ಪೊಲೀಸರು. ಈ ಎಲ್ಲಾ ವಿಚಾರವನ್ನು ಕೌಶಂಬಿ ಎಸ್ ಪಿ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ವಿನಾಕಾರಣ ಜೈಲಿನೊಳಗಿದ್ದ ರಾಜ್ ತಿವಾರಿ ಬಂದ ಮುಕ್ತರಾಗಿದ್ದಾನೆ.

##CrimeCase #FalseAllegations #DowryCase##SocialAwareness#JusticeServed #HaryanaCase

COMMENTS

Login with Gmail to comment

ಇನ್ನಷ್ಟು ಸುದ್ದಿ

₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
“ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ಲಂಚದ ವಿರುದ್ಧ ದೂರು ನೀಡಿದ್ದಕ್ಕೆ ರೈತನ ಮಗನ ವೃಷಣಗಳನ್ನೇ ಒಡೆದ ಪೊಲೀಸ್ ಕ್ರೌರ್ಯ!
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ