📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ

ಅವಳಿಗಿನ್ನು 14 ವರ್ಷ, ಬಾಳಿ ಬದುಕಬೇಕಾಗಿದ್ದ ಹುಡುಗಿಯನ್ನು ಹುಚ್ಚು ನಿರ್ಧಾರದ ಮೂಲಕ ಯಾರು ಮಾಡದಂತಹ ಪಾಪದ ಕೆಲಸವನ್ನು ಮಾಡಿದ್ದಾಳೆ ಹೆತ್ತ ತಾಯಿ. ಈ ಘಟನೆಯು ಕರ್ನಾಟಕದ ರಾಜಧಾನಿ ಬೆಂಗಳೂರು ವೈಟ್ಫೀಲ್ಡ್ ಸಮೀಪದಲ್ಲಿ ನಡೆದಿದೆ.

ಪ್ರೌಢಶಾಲಾ ವಿದ್ಯಾರ್ಥಿಯಾಗಿರುವ ಆ ನತದೃಷ್ಟ ಹುಡುಗಿಯ ಹೆಸರು ಕಾರುಣ್ಯ. ಅವಳನ್ನೇ, ಸ್ವಂತ ತಾಯಿಯಾದ ಸುವರ್ಣ ಎಂಬಾಕೆ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ. ಹಾಗೆ ಹತ್ಯೆ ಮಾಡಿ ತಾನು ಸಹ ನೇಣು ಹಾಕಿಕೊಂಡು ಸತ್ತಿದ್ದಾಳೆ.

ಮಾನಸಿಕ ಅಸ್ವಸ್ಥಳಾದ ಆ ಪಾಪಿ ಸುವರ್ಣ, ತಾಯಿ ಕುಲಕ್ಕೆನೆ ಕಳoಕ ತಂದು ಹಾಕಿದ್ದಾಳೆ. ಹೆತ್ತ ತಾಯಿಯಾದವಳು, ತಾನು ಸತ್ತರು ಮಕ್ಕಳನ್ನು ಬದುಕಿಸುವ ಪ್ರಯತ್ನ ಮಾಡುತ್ತಾರಂತೆ. ಆದರೆ ಇಲ್ಲಿ ಅದಕ್ಕೆ ವಿರುದ್ಧವಾದಂತಹ ದೃಶ್ಯ ಕಾಣುತ್ತಿದೆ.

ಹೆತ್ತ ಮಗಳಿಗೆ ಏನಾದರೂ ಘನ ಘೋರ ಕಾಯಿಲೆ ಇದ್ದರೆ, ಬದುಕಿದ್ದರೆ ಕಷ್ಟ ತಪ್ಪಿದ್ದಲ್ಲ ಎಂಬಂತಹ ಸನ್ನಿವೇಶವಿದ್ದರೆ ಹೆತ್ತವರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉಂಟು. ಇಲ್ಲಿ ಅಂತಹ ಯಾವುದೇ ಸಮಸ್ಯೆ ಇರಲಿಲ್ಲ. ಆರ್ಥಿಕ ಸಮಸ್ಯೆ ಇತ್ತು ನಿಜ. ಚಂದ್ರಶೇಖರ್ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅದರಿಂದಾಗಿ ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಇದನ್ನು ಸರಿದೂಗಿಸಲು ಈ ಹೆತ್ತಮ್ಮ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಿತ್ತು? ಖರ್ಚು ವೆಚ್ಚಗಳಲ್ಲಿ ಹಿಡಿತ ಮಾಡುವುದರ ಜೊತೆಗೆ, ಸ್ವತಹ ತಾನೂ ಸಹ ದುಡಿಮೆಯ ಕಡೆಗೆ ಮುಖ ಮಾಡಬೇಕಿತ್ತು. ಆದರೆ ಅದ್ಯಾವುದರ ಕಡೆಯೂ ಯೋಚನೆ ಮಾಡದ ಮಹಾನ್ ತಾಯಿ , ತನ್ನಷ್ಟಕ್ಕೆ ತಾನು ಏನೇನೋ ಅಂದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾಗಿ ತಾರುಣ್ಯಕ್ಕೆ ಬರುತ್ತಿದ್ದ ಮಗಳನ್ನು ಕೊಲ್ಲಲು ಹೇಗೆ ಮನಸ್ಸು ಮಾಡಿದಳೋ ಅರ್ಥವಾಗುತ್ತಿಲ್ಲ. ಮಗಳ ಒದ್ದಾಟವೂ ಸಹ ಅವಳನ್ನು ಮೃದುವನ್ನಾಗಿಸಲಿಲ್ಲ ಅಂದರೆ ಅದು ಯಾವ ಮಟ್ಟದಲ್ಲಿ  ತಲೆ ಹಾಳು ಮಾಡಿಕೊಂಡಿದ್ದಳು ಊಹಿಸಿ ನೋಡಿ.

ಈ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವಳ ಇನ್ನೊಬ್ಬ ಮಗ ಹಾಸ್ಟೆಲಿನಲ್ಲಿ ಇದ್ದುಕೊಂಡು ಓದಿಕೊಳ್ಳುತ್ತಿದ್ದ. ಹಾಗಾಗಿ ಆತ ಬಚಾವಾಗಿದ್ದಾರೆ ಇಲ್ಲದಿದ್ದರೆ ಅವನನ್ನು ಮುಗಿಸಿಬಿಡುತ್ತಿದ್ದಳೋ ಏನೋ. ಗಂಡ ಚಂದ್ರಶೇಖರ್ ಕೆಲಸಕ್ಕೆ ಹೋದ ನಂತರ ಇಂತಹ ಹೇಗೆ ಕಾರ್ಯವನ್ನು ಮಾಡಿ ತಾನು ನೇಣಿನ ಕುಣಿಕೆಗೆ ತಲೆ ಒಡ್ಡಿದ್ದಾಳೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..