📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ

    ಅವಳಿಗಿನ್ನು 14 ವರ್ಷ, ಬಾಳಿ ಬದುಕಬೇಕಾಗಿದ್ದ ಹುಡುಗಿಯನ್ನು ಹುಚ್ಚು ನಿರ್ಧಾರದ ಮೂಲಕ ಯಾರು ಮಾಡದಂತಹ ಪಾಪದ ಕೆಲಸವನ್ನು ಮಾಡಿದ್ದಾಳೆ ಹೆತ್ತ ತಾಯಿ. ಈ ಘಟನೆಯು ಕರ್ನಾಟಕದ ರಾಜಧಾನಿ ಬೆಂಗಳೂರು ವೈಟ್ಫೀಲ್ಡ್ ಸಮೀಪದಲ್ಲಿ ನಡೆದಿದೆ.

    ಪ್ರೌಢಶಾಲಾ ವಿದ್ಯಾರ್ಥಿಯಾಗಿರುವ ಆ ನತದೃಷ್ಟ ಹುಡುಗಿಯ ಹೆಸರು ಕಾರುಣ್ಯ. ಅವಳನ್ನೇ, ಸ್ವಂತ ತಾಯಿಯಾದ ಸುವರ್ಣ ಎಂಬಾಕೆ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ. ಹಾಗೆ ಹತ್ಯೆ ಮಾಡಿ ತಾನು ಸಹ ನೇಣು ಹಾಕಿಕೊಂಡು ಸತ್ತಿದ್ದಾಳೆ.

    ಮಾನಸಿಕ ಅಸ್ವಸ್ಥಳಾದ ಆ ಪಾಪಿ ಸುವರ್ಣ, ತಾಯಿ ಕುಲಕ್ಕೆನೆ ಕಳoಕ ತಂದು ಹಾಕಿದ್ದಾಳೆ. ಹೆತ್ತ ತಾಯಿಯಾದವಳು, ತಾನು ಸತ್ತರು ಮಕ್ಕಳನ್ನು ಬದುಕಿಸುವ ಪ್ರಯತ್ನ ಮಾಡುತ್ತಾರಂತೆ. ಆದರೆ ಇಲ್ಲಿ ಅದಕ್ಕೆ ವಿರುದ್ಧವಾದಂತಹ ದೃಶ್ಯ ಕಾಣುತ್ತಿದೆ.

    ಹೆತ್ತ ಮಗಳಿಗೆ ಏನಾದರೂ ಘನ ಘೋರ ಕಾಯಿಲೆ ಇದ್ದರೆ, ಬದುಕಿದ್ದರೆ ಕಷ್ಟ ತಪ್ಪಿದ್ದಲ್ಲ ಎಂಬಂತಹ ಸನ್ನಿವೇಶವಿದ್ದರೆ ಹೆತ್ತವರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉಂಟು. ಇಲ್ಲಿ ಅಂತಹ ಯಾವುದೇ ಸಮಸ್ಯೆ ಇರಲಿಲ್ಲ. ಆರ್ಥಿಕ ಸಮಸ್ಯೆ ಇತ್ತು ನಿಜ. ಚಂದ್ರಶೇಖರ್ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅದರಿಂದಾಗಿ ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಇದನ್ನು ಸರಿದೂಗಿಸಲು ಈ ಹೆತ್ತಮ್ಮ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಿತ್ತು? ಖರ್ಚು ವೆಚ್ಚಗಳಲ್ಲಿ ಹಿಡಿತ ಮಾಡುವುದರ ಜೊತೆಗೆ, ಸ್ವತಹ ತಾನೂ ಸಹ ದುಡಿಮೆಯ ಕಡೆಗೆ ಮುಖ ಮಾಡಬೇಕಿತ್ತು. ಆದರೆ ಅದ್ಯಾವುದರ ಕಡೆಯೂ ಯೋಚನೆ ಮಾಡದ ಮಹಾನ್ ತಾಯಿ , ತನ್ನಷ್ಟಕ್ಕೆ ತಾನು ಏನೇನೋ ಅಂದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾಗಿ ತಾರುಣ್ಯಕ್ಕೆ ಬರುತ್ತಿದ್ದ ಮಗಳನ್ನು ಕೊಲ್ಲಲು ಹೇಗೆ ಮನಸ್ಸು ಮಾಡಿದಳೋ ಅರ್ಥವಾಗುತ್ತಿಲ್ಲ. ಮಗಳ ಒದ್ದಾಟವೂ ಸಹ ಅವಳನ್ನು ಮೃದುವನ್ನಾಗಿಸಲಿಲ್ಲ ಅಂದರೆ ಅದು ಯಾವ ಮಟ್ಟದಲ್ಲಿ  ತಲೆ ಹಾಳು ಮಾಡಿಕೊಂಡಿದ್ದಳು ಊಹಿಸಿ ನೋಡಿ.

    ಈ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವಳ ಇನ್ನೊಬ್ಬ ಮಗ ಹಾಸ್ಟೆಲಿನಲ್ಲಿ ಇದ್ದುಕೊಂಡು ಓದಿಕೊಳ್ಳುತ್ತಿದ್ದ. ಹಾಗಾಗಿ ಆತ ಬಚಾವಾಗಿದ್ದಾರೆ ಇಲ್ಲದಿದ್ದರೆ ಅವನನ್ನು ಮುಗಿಸಿಬಿಡುತ್ತಿದ್ದಳೋ ಏನೋ. ಗಂಡ ಚಂದ್ರಶೇಖರ್ ಕೆಲಸಕ್ಕೆ ಹೋದ ನಂತರ ಇಂತಹ ಹೇಗೆ ಕಾರ್ಯವನ್ನು ಮಾಡಿ ತಾನು ನೇಣಿನ ಕುಣಿಕೆಗೆ ತಲೆ ಒಡ್ಡಿದ್ದಾಳೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    ಮೋದಿ ವಿಡಿಯೋ ಡಿಲೀಟ್ ವಿವಾದ: ಭಾರತಕ್ಕೆ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್!
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್