📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ

ಅವಳಿಗಿನ್ನು 14 ವರ್ಷ, ಬಾಳಿ ಬದುಕಬೇಕಾಗಿದ್ದ ಹುಡುಗಿಯನ್ನು ಹುಚ್ಚು ನಿರ್ಧಾರದ ಮೂಲಕ ಯಾರು ಮಾಡದಂತಹ ಪಾಪದ ಕೆಲಸವನ್ನು ಮಾಡಿದ್ದಾಳೆ ಹೆತ್ತ ತಾಯಿ. ಈ ಘಟನೆಯು ಕರ್ನಾಟಕದ ರಾಜಧಾನಿ ಬೆಂಗಳೂರು ವೈಟ್ಫೀಲ್ಡ್ ಸಮೀಪದಲ್ಲಿ ನಡೆದಿದೆ.

ಪ್ರೌಢಶಾಲಾ ವಿದ್ಯಾರ್ಥಿಯಾಗಿರುವ ಆ ನತದೃಷ್ಟ ಹುಡುಗಿಯ ಹೆಸರು ಕಾರುಣ್ಯ. ಅವಳನ್ನೇ, ಸ್ವಂತ ತಾಯಿಯಾದ ಸುವರ್ಣ ಎಂಬಾಕೆ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ. ಹಾಗೆ ಹತ್ಯೆ ಮಾಡಿ ತಾನು ಸಹ ನೇಣು ಹಾಕಿಕೊಂಡು ಸತ್ತಿದ್ದಾಳೆ.

ಮಾನಸಿಕ ಅಸ್ವಸ್ಥಳಾದ ಆ ಪಾಪಿ ಸುವರ್ಣ, ತಾಯಿ ಕುಲಕ್ಕೆನೆ ಕಳoಕ ತಂದು ಹಾಕಿದ್ದಾಳೆ. ಹೆತ್ತ ತಾಯಿಯಾದವಳು, ತಾನು ಸತ್ತರು ಮಕ್ಕಳನ್ನು ಬದುಕಿಸುವ ಪ್ರಯತ್ನ ಮಾಡುತ್ತಾರಂತೆ. ಆದರೆ ಇಲ್ಲಿ ಅದಕ್ಕೆ ವಿರುದ್ಧವಾದಂತಹ ದೃಶ್ಯ ಕಾಣುತ್ತಿದೆ.

ಹೆತ್ತ ಮಗಳಿಗೆ ಏನಾದರೂ ಘನ ಘೋರ ಕಾಯಿಲೆ ಇದ್ದರೆ, ಬದುಕಿದ್ದರೆ ಕಷ್ಟ ತಪ್ಪಿದ್ದಲ್ಲ ಎಂಬಂತಹ ಸನ್ನಿವೇಶವಿದ್ದರೆ ಹೆತ್ತವರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉಂಟು. ಇಲ್ಲಿ ಅಂತಹ ಯಾವುದೇ ಸಮಸ್ಯೆ ಇರಲಿಲ್ಲ. ಆರ್ಥಿಕ ಸಮಸ್ಯೆ ಇತ್ತು ನಿಜ. ಚಂದ್ರಶೇಖರ್ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅದರಿಂದಾಗಿ ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಇದನ್ನು ಸರಿದೂಗಿಸಲು ಈ ಹೆತ್ತಮ್ಮ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಿತ್ತು? ಖರ್ಚು ವೆಚ್ಚಗಳಲ್ಲಿ ಹಿಡಿತ ಮಾಡುವುದರ ಜೊತೆಗೆ, ಸ್ವತಹ ತಾನೂ ಸಹ ದುಡಿಮೆಯ ಕಡೆಗೆ ಮುಖ ಮಾಡಬೇಕಿತ್ತು. ಆದರೆ ಅದ್ಯಾವುದರ ಕಡೆಯೂ ಯೋಚನೆ ಮಾಡದ ಮಹಾನ್ ತಾಯಿ , ತನ್ನಷ್ಟಕ್ಕೆ ತಾನು ಏನೇನೋ ಅಂದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾಗಿ ತಾರುಣ್ಯಕ್ಕೆ ಬರುತ್ತಿದ್ದ ಮಗಳನ್ನು ಕೊಲ್ಲಲು ಹೇಗೆ ಮನಸ್ಸು ಮಾಡಿದಳೋ ಅರ್ಥವಾಗುತ್ತಿಲ್ಲ. ಮಗಳ ಒದ್ದಾಟವೂ ಸಹ ಅವಳನ್ನು ಮೃದುವನ್ನಾಗಿಸಲಿಲ್ಲ ಅಂದರೆ ಅದು ಯಾವ ಮಟ್ಟದಲ್ಲಿ  ತಲೆ ಹಾಳು ಮಾಡಿಕೊಂಡಿದ್ದಳು ಊಹಿಸಿ ನೋಡಿ.

ಈ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವಳ ಇನ್ನೊಬ್ಬ ಮಗ ಹಾಸ್ಟೆಲಿನಲ್ಲಿ ಇದ್ದುಕೊಂಡು ಓದಿಕೊಳ್ಳುತ್ತಿದ್ದ. ಹಾಗಾಗಿ ಆತ ಬಚಾವಾಗಿದ್ದಾರೆ ಇಲ್ಲದಿದ್ದರೆ ಅವನನ್ನು ಮುಗಿಸಿಬಿಡುತ್ತಿದ್ದಳೋ ಏನೋ. ಗಂಡ ಚಂದ್ರಶೇಖರ್ ಕೆಲಸಕ್ಕೆ ಹೋದ ನಂತರ ಇಂತಹ ಹೇಗೆ ಕಾರ್ಯವನ್ನು ಮಾಡಿ ತಾನು ನೇಣಿನ ಕುಣಿಕೆಗೆ ತಲೆ ಒಡ್ಡಿದ್ದಾಳೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಸಚಿವ ಜಮೀರ್ ಕಥೆ ಗೋವಿಂದ!!!?
ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”