📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!

ಹೋಳಿ ಮತ್ತು Ramdan ಹಬ್ಬಗಳ ನಡುವೆ ನಡೆಯಬಾರದ್ದು ನಡೆದು ಒಂದು ಜೀವವೇ ಹೋಯಿತು ……..!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆ ಒಂದು ಸಣ್ಣ ತಪ್ಪಲ್ಲದ ತಪ್ಪು ಹೇಗೆ ಭೀಕರ ಹಿಂಸೆಗೆ ಕಾರಣವಾಯಿತು ನೋಡಿ …

ಒಂದು ಸಣ್ಣ ತಪ್ಪಿನಿಂದ ಆರಂಭವಾದ ಘಟನೆಯು ಸಹನೆ, ಸಮಜಾಯಿಷಿ ಮತ್ತು ಮಾನವೀಯತೆ ಕೊರತೆಯಿಂದ ಹೇಗೆ ದೊಡ್ಡ ದುರಂತವಾಗಿ ಮಾರ್ಪಟ್ಟಿತು ಎಂಬುದು ಈ ಘಟನೆ ಮತ್ತೆ ಸಾಕ್ಷೀಕರಿಸುತ್ತದೆ . ಹಬ್ಬಗಳ ಮೂಲ, ಸಂಭ್ರಮ ಮತ್ತು ಸೌಹಾರ್ದತೆಯನ್ನು ಸಾರುವುದಾದರೂ, ಕ್ಷಣಿಕ ಕೋಪ ಮತ್ತು ಅಸಹನೆಯಿಂದ ಒಂದು ಅಮೂಲ್ಯ ಜೀವ ಕಳೆದುಹೋಗಿರುವುದು ದುಃಖಕರ ಸಂಗತಿಯಾಗಿದೆ.

ಹೋಳಿ ಹಬ್ಬದಂದು ಕೆಲವು ಚಿಕ್ಕ ಮಕ್ಕಳು ಆಟವಾಡುತ್ತಾ ಬಣ್ಣಗಳಿಂದ ಸಂಭ್ರಮಿಸುತ್ತಿದ್ದರು. ಆ ವೇಳೆ ಅಜಾಗರೂಕತೆಯಿಂದ ಹೋಳಿ ಬಣ್ಣದ ಪುಡಿ ಅಲ್ಲಿ ಹಾದು ಹೋಗುತ್ತಿದ್ದ ಒಬ್ಬ ಮುಸ್ಲಿಂ ಮಹಿಳೆಯ ಕಾಲಿನ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಆಕೆ ಕೋಪಗೊಂಡು ಕೂಗಿದ ನಂತರ, ಆಕೆಯ ಸಮುದಾಯದ ಕೆಲವರು ಅಲ್ಲಿಗೆ ಕೂಡಿಕೊಂಡರು. ಆರಂಭದಲ್ಲಿ ಸಣ್ಣ ಮಾತಿನ ಚಕಮಕಿಯಾಗಿ ಆರಂಭವಾದ ಘಟನೆ, ಸಹನೆ ಮತ್ತು ಮಾನವೀಯತೆ ಕೊರತೆಯಿಂದ ಬೇಗನೆ ಉದ್ವಿಗ್ನತೆಯಾಗಿ ತಿರುಗಿತು.

ಸ್ಥಳೀಯರ ಹೇಳಿಕೆಗೆ ಅನುಸಾರ, ಆ ಸಂದರ್ಭದಲ್ಲಿ ಕೆಲವರು ಆಕ್ರೋಶಗೊಂಡು ಹೋಲಿ ಪೌಡರ್  ಎರಚಿದ ಮನೆಗೆ ಒಳಗಡೆ ನುಗ್ಗಿ ಹಲ್ಲೆ ಮಾಡಲೇತನ್ಸಿದಾಗ ಅವರು ಹೆದರಿ ಓಡಿ ಬಾಗಿಲು ಲಾಕ್ ಮಾಡಿ ಒಳಗಡೆ ಇರುವಾಗಲೇ ಏನು ನಡಿತಾ ಇದೆ ಅಂತಾನೇ ಗೊತ್ತಿಲ್ಲದ ಹೊರಗಿನಿಂದ ಬಂದ ಆ ಮನೆಯ ಯುವಕ  ವಿಚಾರಿಸಲು ಮುಂದಾದಾಗ ಉದ್ರಿಕ್ತ ಗುಂಪು ತರುಣ್ ಎಂಬ ಯುವಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ತರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ರಮಝಾನ್ ಪವಿತ್ರ ತಿಂಗಳಲ್ಲಿಯೇ ಈ ರೀತಿಯ ಹಿಂಸಾಚಾರ ನಡೆದಿರುವುದು ಹಲವರಲ್ಲಿ ಬೇಸರ ಮತ್ತು ಆಘಾತಕ್ಕೆ ಕಾರಣವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಇದುವರೆಗೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಲ್ಲಿ ಉಮರುದ್ದೀನ್, ಆತನ ಸಹೋದರ ಕಮ್ರುದ್ದೀನ್ ಮತ್ತು ಮಗ ಮುಜಾಫರ್ ಒಂದೇ ಕುಟುಂಬದವರು ಎಂದು ವರದಿಯಾಗಿದೆ.

ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಆಕ್ರೋಶಗೊಂಡ ಕೆಲವರು ಆರೋಪಿಗಳ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದ ಘಟನೆ ಕೂಡ ನಡೆದಿದೆ. ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ನಿಜಾಮುದ್ದೀನ್‌ಗೆ ಸೇರಿದ ಆಸ್ತಿಯನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಭೀಕರ ಅಪಘಾತ ಮಹಿಳೆ ಬಲಿ
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!