📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!

ಹೋಳಿ ಮತ್ತು Ramdan ಹಬ್ಬಗಳ ನಡುವೆ ನಡೆಯಬಾರದ್ದು ನಡೆದು ಒಂದು ಜೀವವೇ ಹೋಯಿತು ……..!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆ ಒಂದು ಸಣ್ಣ ತಪ್ಪಲ್ಲದ ತಪ್ಪು ಹೇಗೆ ಭೀಕರ ಹಿಂಸೆಗೆ ಕಾರಣವಾಯಿತು ನೋಡಿ …

ಒಂದು ಸಣ್ಣ ತಪ್ಪಿನಿಂದ ಆರಂಭವಾದ ಘಟನೆಯು ಸಹನೆ, ಸಮಜಾಯಿಷಿ ಮತ್ತು ಮಾನವೀಯತೆ ಕೊರತೆಯಿಂದ ಹೇಗೆ ದೊಡ್ಡ ದುರಂತವಾಗಿ ಮಾರ್ಪಟ್ಟಿತು ಎಂಬುದು ಈ ಘಟನೆ ಮತ್ತೆ ಸಾಕ್ಷೀಕರಿಸುತ್ತದೆ . ಹಬ್ಬಗಳ ಮೂಲ, ಸಂಭ್ರಮ ಮತ್ತು ಸೌಹಾರ್ದತೆಯನ್ನು ಸಾರುವುದಾದರೂ, ಕ್ಷಣಿಕ ಕೋಪ ಮತ್ತು ಅಸಹನೆಯಿಂದ ಒಂದು ಅಮೂಲ್ಯ ಜೀವ ಕಳೆದುಹೋಗಿರುವುದು ದುಃಖಕರ ಸಂಗತಿಯಾಗಿದೆ.

ಹೋಳಿ ಹಬ್ಬದಂದು ಕೆಲವು ಚಿಕ್ಕ ಮಕ್ಕಳು ಆಟವಾಡುತ್ತಾ ಬಣ್ಣಗಳಿಂದ ಸಂಭ್ರಮಿಸುತ್ತಿದ್ದರು. ಆ ವೇಳೆ ಅಜಾಗರೂಕತೆಯಿಂದ ಹೋಳಿ ಬಣ್ಣದ ಪುಡಿ ಅಲ್ಲಿ ಹಾದು ಹೋಗುತ್ತಿದ್ದ ಒಬ್ಬ ಮುಸ್ಲಿಂ ಮಹಿಳೆಯ ಕಾಲಿನ ಮೇಲೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ಆಕೆ ಕೋಪಗೊಂಡು ಕೂಗಿದ ನಂತರ, ಆಕೆಯ ಸಮುದಾಯದ ಕೆಲವರು ಅಲ್ಲಿಗೆ ಕೂಡಿಕೊಂಡರು. ಆರಂಭದಲ್ಲಿ ಸಣ್ಣ ಮಾತಿನ ಚಕಮಕಿಯಾಗಿ ಆರಂಭವಾದ ಘಟನೆ, ಸಹನೆ ಮತ್ತು ಮಾನವೀಯತೆ ಕೊರತೆಯಿಂದ ಬೇಗನೆ ಉದ್ವಿಗ್ನತೆಯಾಗಿ ತಿರುಗಿತು.

ಸ್ಥಳೀಯರ ಹೇಳಿಕೆಗೆ ಅನುಸಾರ, ಆ ಸಂದರ್ಭದಲ್ಲಿ ಕೆಲವರು ಆಕ್ರೋಶಗೊಂಡು ಹೋಲಿ ಪೌಡರ್  ಎರಚಿದ ಮನೆಗೆ ಒಳಗಡೆ ನುಗ್ಗಿ ಹಲ್ಲೆ ಮಾಡಲೇತನ್ಸಿದಾಗ ಅವರು ಹೆದರಿ ಓಡಿ ಬಾಗಿಲು ಲಾಕ್ ಮಾಡಿ ಒಳಗಡೆ ಇರುವಾಗಲೇ ಏನು ನಡಿತಾ ಇದೆ ಅಂತಾನೇ ಗೊತ್ತಿಲ್ಲದ ಹೊರಗಿನಿಂದ ಬಂದ ಆ ಮನೆಯ ಯುವಕ  ವಿಚಾರಿಸಲು ಮುಂದಾದಾಗ ಉದ್ರಿಕ್ತ ಗುಂಪು ತರುಣ್ ಎಂಬ ಯುವಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ತರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ರಮಝಾನ್ ಪವಿತ್ರ ತಿಂಗಳಲ್ಲಿಯೇ ಈ ರೀತಿಯ ಹಿಂಸಾಚಾರ ನಡೆದಿರುವುದು ಹಲವರಲ್ಲಿ ಬೇಸರ ಮತ್ತು ಆಘಾತಕ್ಕೆ ಕಾರಣವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಇದುವರೆಗೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಲ್ಲಿ ಉಮರುದ್ದೀನ್, ಆತನ ಸಹೋದರ ಕಮ್ರುದ್ದೀನ್ ಮತ್ತು ಮಗ ಮುಜಾಫರ್ ಒಂದೇ ಕುಟುಂಬದವರು ಎಂದು ವರದಿಯಾಗಿದೆ.

ಘಟನೆಯ ನಂತರ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಆಕ್ರೋಶಗೊಂಡ ಕೆಲವರು ಆರೋಪಿಗಳ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದ ಘಟನೆ ಕೂಡ ನಡೆದಿದೆ. ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿ ನಿಜಾಮುದ್ದೀನ್‌ಗೆ ಸೇರಿದ ಆಸ್ತಿಯನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
“ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
“ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
ಸಿಲಿಂಡರ್ ಪಡೆಯಲು ಹೊಸ ಶರತ್ತುಗಳು – ಈಗಲೇ ತಿಳಿದುಕೊಳ್ಳಿ, …
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ