📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!

ಬೆಂಗಳೂರು/ನವದೆಹಲಿ: ನೈರುತ್ಯ ಮುಂಗಾರು ಸಂಪೂರ್ಣ ಚುರುಕುಗೊಂಡಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಜೂನ್ 11ರವರೆಗೆ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮುಂಗಾರಿನ ಪ್ರಭಾವದಿಂದ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಕರಾವಳಿ ಕರ್ನಾಟಕದಲ್ಲಿ ಮಳೆ ತನ್ನ ಅಬ್ಬರ ತೋರಿಸಿದ್ದು, ಹೊನ್ನಾವರದಲ್ಲಿ 9 ಸೆಂ.ಮೀ., ಕಾರವಾರ ಮತ್ತು ಮಂಕಿಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ನದಿಗಳು ಮತ್ತು ಹಳ್ಳಗಳು ಉಕ್ಕುವ ಸಾಧ್ಯತೆ ಬಗ್ಗೆ ಸ್ಥಳೀಯ ಆಡಳಿತ ನಿಗಾ ವಹಿಸಿದೆ.

ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ 30–40 ಕಿ.ಮೀ. ವೇಗದ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮುಂದಿನ ವಾರ ಪೂರ್ತಿ ಮಳೆ ಮುಂದುವರಿಯಲಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ರೈತರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.

ಇತ್ತ ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವೈನಾಡು ಸೇರಿದಂತೆ ಉತ್ತರ ಕೇರಳದ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಭೂಕುಸಿತ ಹಾಗೂ ಪ್ರವಾಹದ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಅಗತ್ಯವಿಲ್ಲದ ಪ್ರಯಾಣಗಳನ್ನು ತಪ್ಪಿಸಿ, ಮರಗಳ ಕೆಳಗೆ ನಿಲ್ಲಬೇಡಿ, ನದಿಗಳು ಮತ್ತು ಸಮುದ್ರ ತೀರದ ಅಪಾಯಕಾರಿ ಪ್ರದೇಶಗಳಿಂದ ದೂರವಿರಿ. ಮುಂದಿನ ಕೆಲ ದಿನಗಳು ಮುಂಗಾರಿನ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

#: #KarnatakaRain #MonsoonAlert #IMDWeatherUpdate #HeavyRainWarning #KeralaRain #WeatherAlertIndia

COMMENTS

Login with Gmail to comment

ಇನ್ನಷ್ಟು ಸುದ್ದಿ

ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ