📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..

    ತಮಿಳು ಸೂಪರ್‌ಸ್ಟಾರ್ Rajinikanth ಅಭಿನಯದ ಬಹುನಿರೀಕ್ಷಿತ Jailer 2 ಚಿತ್ರದ ಚಿತ್ರೀಕರಣದ ವೇಳೆ ದುರ್ಘಟನೆಯೊಂದು ಸಂಭವಿಸಿದ್ದು, ಚಿತ್ರತಂಡ ಹಾಗೂ ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಸಿನಿಮಾದ ಸೆಟ್‌ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಲಾ ವಿಭಾಗದ ಸಿಬ್ಬಂದಿ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಒಳಗಾಗಿ ದುರ್ಮರಣ ಹೊಂದಿದ್ದಾರೆ ಎಂಬ ಸುದ್ದಿ ಚಿತ್ರರಂಗವನ್ನು ಬೆಚ್ಚಿಬೀಳಿಸಿದೆ.

    ಚೆನ್ನೈನ ಪಣಯೂರ್ ಪ್ರದೇಶದಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಅಂತಿಮ ಹಂತದ ಸೆಟ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದವು. ಮನೆಯ ಮಾದರಿಯ ಭವ್ಯ ಸೆಟ್ ನಿರ್ಮಾಣ ಮಾಡಲಾಗುತ್ತಿದ್ದು, ಇದೇ ವೇಳೆ ಅಚಾನಕ್ ವಿದ್ಯುತ್ ತಂತಿ ಕಾರ್ತಿಕೇಯನ್ ಅವರಿಗೆ ತಗುಲಿದ ಪರಿಣಾಮ ಭೀಕರ ಶಾಕ್ ಹೊಡೆದಿದೆ. ಘಟನೆಯ ತೀವ್ರತೆಯಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಟ್ಟಿದ್ದಾರೆ.

    ಆದರೆ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಕಾರ್ತಿಕೇಯನ್ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಯುವ ಸಿಬ್ಬಂದಿಯ ಅಕಾಲಿಕ ಸಾವಿನಿಂದ ಚಿತ್ರತಂಡ ಕಂಗಾಲಾಗಿದ್ದು, ಸೆಟ್‌ನಲ್ಲಿದ್ದ ಹಲವರು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ದುಡಿಯುವ ವಯಸ್ಸಿನ ಯುವಕನೊಬ್ಬ ಹೀಗೆ ದಾರುಣವಾಗಿ ಸಾವನ್ನಪ್ಪಿರುವುದು ಕುಟುಂಬಸ್ಥರು ಮತ್ತು ಸ್ನೇಹಿತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

    ಈ ದುರ್ಘಟನೆ ಕುರಿತು ಕಾನತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೆಟ್‌ನಲ್ಲಿ ಸುರಕ್ಷತಾ ಕ್ರಮಗಳಲ್ಲಿ ಏನಾದರೂ ನಿರ್ಲಕ್ಷ್ಯವಾಗಿತ್ತೇ? ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ದೋಷವಿತ್ತೇ? ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರರಂಗದ ಕೆಲಸಗಾರರ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.

    ಇದೀಗಾಗಲೇ Jailer ಚಿತ್ರದ ಮೊದಲ ಭಾಗ ಭಾರೀ ಯಶಸ್ಸು ಕಂಡಿತ್ತು. ವಿಶೇಷವಾಗಿ Shivarajkumar ಅವರ ಅತಿಥಿ ಪಾತ್ರ ಸಿನಿಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದಿತ್ತು. ಥಿಯೇಟರ್‌ಗಳಲ್ಲಿ ಶಿವಣ್ಣನ ಎಂಟ್ರಿಗೆ ಅಭಿಮಾನಿಗಳು ಕೂಗಿ ಕುಣಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಕಾರಣಕ್ಕೆ ಸೀಕ್ವೆಲ್‌ನಲ್ಲಿ ಶಿವರಾಜ್‌ಕುಮಾರ್ ಅವರ ಪಾತ್ರವನ್ನು ಇನ್ನಷ್ಟು ಪ್ರಭಾವಶಾಲಿಯಾಗಿ ತೋರಿಸಲು ಚಿತ್ರತಂಡ ಯೋಜನೆ ರೂಪಿಸಿತ್ತು ಎನ್ನಲಾಗುತ್ತಿದೆ.

    ಆದರೆ, ಚಿತ್ರದ ಕೆಲಸಗಳು ಜೋರಾಗಿ ಸಾಗುತ್ತಿದ್ದ ಈ ಹೊತ್ತಿನಲ್ಲಿ ಸಂಭವಿಸಿದ ಈ ದಾರುಣ ಘಟನೆ ಅಭಿಮಾನಿಗಳ ಮನಸ್ಸಿಗೆ ನೋವು ತಂದಿದೆ. ಒಂದು ಕಡೆ ಬಹುನಿರೀಕ್ಷಿತ ಸಿನಿಮಾದ ಮೇಲಿನ ಕುತೂಹಲ ಇದ್ದರೂ, ಮತ್ತೊಂದು ಕಡೆ ಕಾರ್ತಿಕೇಯನ್ ಅವರ ಸಾವಿನ ಸುದ್ದಿ ಚಿತ್ರರಂಗದಲ್ಲಿ ಕಹಿ ನೆನಪನ್ನ ಬಿಟ್ಟು ಹೋಗಿದೆ.

    ##Jailer2 #Rajinikanth #Shivarajkumar #Kollywood #Jailer2Update #CinemaNews #RIPKarthikeyan

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    3-ಭಾಷಾ ನೀತಿಗೆ ಬ್ರೇಕ್? CBSEಗೆ ಸುಪ್ರೀಂ ಕೋರ್ಟ್‌ ಮಹತ್ವದ ಸೂಚನೆ
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    2027ರಲ್ಲಿ ರಸ್ತೆಗಿಳಿಯಲಿರುವ EV ಕಾರ್ Avinya X ನೋಡಿದರೆ ಸಾಮಾನ್ಯ SUVಗಳನ್ನೇ ಮರೆತುಬಿಡುತ್ತಿರಾ…ಬರುತ್ತಿದೆ ಟಾಟಾದ ಅತ್ಯಂತ ದುಬಾರಿ ಕನಸು!
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan