📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!

ಮುಂಬೈ ವರ್ಲಿ ರಸ್ತೆ ಪ್ರತಿಭಟನೆ – ಮಹಿಳೆಯ ಆಕ್ರೋಶ ವೈರಲ್, ನಂತರ ವಿವಾದಕ್ಕೆ ತಿರುಗಿದ್ದು ಯಾಕೆ?

ವರ್ಲಿ ರಸ್ತೆಯಲ್ಲಿ ನಡೆದ ಪ್ರತಿಭಟನೆ ವೇಳೆ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದು, ರಸ್ತೆ ಸಂಪೂರ್ಣ ಜಾಮ್ ಆಗಿ ಜನಸಾಮಾನ್ಯರಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅನುಮತಿ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಶಿಸ್ತಿಗೆ ಧಕ್ಕೆ ತಂದ ಆರೋಪದ ಮೇಲೆ ತನಿಖೆ ಮುಂದುವರಿದಿದೆ.

ಇದೇ ವೇಳೆ, ಪ್ರತಿಭಟನೆ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರನ್ನು ಪ್ರಶ್ನಿಸಿದ್ದ ಮಹಿಳೆಯ ವಿರುದ್ಧ ಕಾನೂನು ವಿದ್ಯಾರ್ಥಿನಿ ಝೆನ್ ಸದವರ್ತೇ ಅವರು ಪೊಲೀಸರಿಗೆ ದೂರು ಸಲ್ಲಿಸಿರುವುದು ಹೊಸ ತಿರುವು ಪಡೆದಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಯಾಗಿದೆ ಎಂಬ ಆರೋಪದಡಿ ಈ ದೂರು ದಾಖಲಿಸಲಾಗಿದ್ದು, ಈ ಘಟನೆಯು ಈಗ ಪರಸ್ಪರ ಆರೋಪ–ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಮುಂಬೈಯ ವರ್ಲಿ ಪ್ರದೇಶದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆ ಈಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ರಸ್ತೆ ಸಂಪೂರ್ಣ ಜಾಮ್ ಆಗಿ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ದೇಶದಾದ್ಯಂತ ಚರ್ಚೆ ಮುಂದುವರಿದಿದೆ.

ಗಂಟೆಗಳ ಕಾಲ ಸಂಚಾರ ನಿಂತುಹೋಗಿದ್ದು, ಶಾಲೆಯಿಂದ ಮಗುವನ್ನು ಕರೆದುಕೊಂಡು ಮನೆಗೆ ಹೋಗುತ್ತಿದ್ದ ತಾಯಿ ಸೇರಿದಂತೆ ಹಲವಾರು ನಾಗರಿಕರು ರಸ್ತೆ ಮಧ್ಯೆ ಸಿಲುಕಿಕೊಂಡಿದ್ದರು. ಈ ಸಂದರ್ಭ ಒಬ್ಬ ಮಹಿಳೆ ಕಾರಿನಿಂದ ಇಳಿದು ಪ್ರತಿಭಟನಾಕಾರರನ್ನು ಹಾಗೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿದೆ.

💥 “ರಸ್ತೆಯಲ್ಲಿ ಪ್ರತಿಭಟನೆ ಮಾಡಬೇಡಿ, ಮೈದಾನ ಇದೆ ಅಲ್ಲಿ ಮಾಡಿ!” ಎಂಬ ಆಕೆಯ ಆಕ್ರೋಶಭರಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ಪಡೆದಿವೆ. ಹಲವರು ಆಕೆಯನ್ನು “ಜನಸಾಮಾನ್ಯರ ಧ್ವನಿ” ಎಂದು ಕೊಂಡಾಡಿದ್ದಾರೆ.

📢 ಆದರೆ ಇದೇ ಘಟನೆ ಈಗ ಹೊಸ ತಿರುವು ಪಡೆದಿದೆ. ಕಾನೂನು ವಿದ್ಯಾರ್ಥಿನಿ ಝನ್ ಸದವರ್ತೇ ಅವರು ಆ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅವರ ಆರೋಪದ ಪ್ರಕಾರ, ಆ ಮಹಿಳೆ ಪೊಲೀಸರೊಂದಿಗೆ ಆಕ್ರೋಶದಿಂದ ಮಾತನಾಡಿದ್ದು ಕರ್ತವ್ಯಕ್ಕೆ ಅಡ್ಡಿಯಾಗಿದೆ.

ಈ ಬೆಳವಣಿಗೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಎರಡು ಬಗೆಯ ಅಭಿಪ್ರಾಯಗಳು ಮೂಡಿವೆ:
👉 ಹೆಚ್ಚಿನವರು ಮಹಿಳೆಯ ಪರವಾಗಿ ನಿಂತು “ಜನರ ತೊಂದರೆ ಪ್ರಶ್ನಿಸಿದ ಧೈರ್ಯ” ಎಂದು ಹೇಳುತ್ತಿದ್ದಾರೆ
👉 ಇನ್ನೂ ಕೆಲವರು “ಪೊಲೀಸ್ ಕಾರ್ಯಕ್ಕೆ ಅಡ್ಡಿ” ಎಂದು ದೂರು ಸರಿಯೆಂದು ವಾದಿಸುತ್ತಿದ್ದಾರೆ

ಈಗ ಈ ಘಟನೆ ಒಂದು ದೊಡ್ಡ ಚರ್ಚೆಗೆ ಕಾರಣವಾಗಿದೆ –

#: #MumbaiNews #VarliProtest #PublicReaction #ViralVideo #IndiaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಭೀಕರ ಅಪಘಾತ ಮಹಿಳೆ ಬಲಿ
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ