📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!

ಮಂಗಳೂರು ನಗರದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿ ಬಂಧನ

ಮಂಗಳೂರು, ಏಪ್ರಿಲ್ 19: ಮಂಗಳೂರು ನಗರ ಪೊಲೀಸ್ ಮಹತ್ವದ ಕಾರ್ಯಾಚರಣೆಯಲ್ಲಿ, ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೆ. ಅಬ್ದುಲ್ ಬಶೀರ್ @ ಅರ್ಗ ಬಶೀರ್ (50) ಎಂಬಾತನನ್ನು ಬಂಧಿಸಿದೆ.

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಈತನ ವಿರುದ್ಧ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಕಳೆದ 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಮಾನ್ಯ ನ್ಯಾಯಾಲಯವು ದಸ್ತಗಿರಿ ಹಾಗೂ ಉದ್ಗೋಷಣಾ ವಾರೆಂಟ್ ಹೊರಡಿಸಿತ್ತು.

ತನಿಖೆಯಲ್ಲಿ, ಆರೋಪಿ ತನ್ನ ಮೂಲ ವಾಸಸ್ಥಳವಾದ ತೆಂಕ ಮಿಜಾರು ಗ್ರಾಮವನ್ನು ಬಿಟ್ಟು, ಬಂಟ್ವಾಳ ತಾಲೂಕಿನ ಬಿಸಿ ರೋಡ್ ಸಮೀಪದ ಪರ್ಲಿಯಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿ ಕುಳಿತಿದ್ದನು ಎಂಬುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ, ಪೊಲೀಸರು 18-04-2026ರಂದು ಸಂಜೆ 7:30ಕ್ಕೆ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವುದರಿಂದ, ಈತನ ವಿರುದ್ಧ ಮೂಡಬಿದ್ರೆ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರ:

ಮೂಡಬಿದ್ರೆ ಪೊಲೀಸ್ ಠಾಣೆ:

  1. ಅ.ಕ್ರ 413/2017 – ಕಲಂ 379, 34 IPC ಹಾಗೂ Karnataka Prevention of Cow Slaughter Act (4,5,7,8,9,11)
  2. ಅ.ಕ್ರ 439/2017 – ಕಲಂ 397, 506, 34 IPC ಹಾಗೂ ಗೋಹತ್ಯೆ ನಿಷೇಧ ಕಾಯ್ದೆ
  3. ಅ.ಕ್ರ 46/2019 – ಕಲಂ 143,147,148,341,504,427,323,324,506 r/w 149 IPC
  4. ಅ.ಕ್ರ 51/2019 – ಕಲಂ 379 IPC
  5. ಅ.ಕ್ರ 207/2021 – ಕಲಂ 279, 379, 511 IPC ಹಾಗೂ ಭಾರತೀಯ ಶಸ್ತ್ರ ಕಾಯ್ದೆ 5, 25
  6. ಅ.ಕ್ರ 41/2022 – ಕಲಂ 323,324,365,506 r/w 34 IPC
  7. ಅ.ಕ್ರ 44/2026 – ಕಲಂ 208, 269 BNS

ಬಜ್ಪೆ ಪೊಲೀಸ್ ಠಾಣೆ:
8. ಅ.ಕ್ರ 250/2014 – ಕಲಂ 392 IPC ಹಾಗೂ Prevention of Cruelty to Animals Act (4,8,11)
9. ಅ.ಕ್ರ 101/2015 – ಕಲಂ 143,147,148,448,323,324,504,363 r/w 149 IPC
10. ಅ.ಕ್ರ 199/2016 – ಕಲಂ 143,147,148,448,504,323,354,307 r/w 149 IPC
11. ಅ.ಕ್ರ 200/2016 – ಕಲಂ 143,147,148,341,504,323,324,307 r/w 149 IPC
12. ಅ.ಕ್ರ 170/2017 – ಕಲಂ 379,429 IPC ಹಾಗೂ Prevention of Cruelty to Animals Act ಮತ್ತು Cow Slaughter Act

ಇತರೆ ಠಾಣೆಗಳು:
13. ಮಂಗಳೂರು ಗ್ರಾಮಾಂತರ ಠಾಣೆ ಅ.ಕ್ರ 267/2015 – ಕಲಂ 379 IPC ಹಾಗೂ ವಿವಿಧ ಜಾನುವಾರು ಕಾಯ್ದೆಗಳು
14. ಧರ್ಮಸ್ಥಳ ಠಾಣೆ ಅ.ಕ್ರ 21/2017 – Cow Slaughter Act ಹಾಗೂ IMV Act 66,192
15. ಬೆಳ್ತಂಗಡಿ ಠಾಣೆ ಅ.ಕ್ರ 32/2019 – ಕಲಂ 279,379 IPC ಹಾಗೂ ಸಂಬಂಧಿತ ಕಾಯ್ದೆಗಳು
16. ಕಳಸ ಠಾಣೆ ಅ.ಕ್ರ 77/2018 – ಕಲಂ 353,379 IPC
17. ಕಳಸ ಠಾಣೆ ಅ.ಕ್ರ 33/2019 – ಕಲಂ 379 IPC

ಈ ಎಲ್ಲಾ ಪ್ರಕರಣಗಳು ಕಳ್ಳತನ, ದರೋಡೆ, ದಾಳಿ, ಅಪಹರಣ, ಶಸ್ತ್ರಾಸ್ತ್ರ ಬಳಕೆ ಹಾಗೂ ಜಾನುವಾರು ಸಂಬಂಧಿತ ಗಂಭೀರ ಅಪರಾಧಗಳಿಗೆ ಸಂಬಂಧಪಟ್ಟಿವೆ.

##MangaluruPolice #Arrested #CrimeNews #BreakingNews #DakshinaKannada #KarnatakaPolice #CrimeUpdate #LawAndOrder #PoliceAction

COMMENTS

Login with Gmail to comment

ಇನ್ನಷ್ಟು ಸುದ್ದಿ

ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!