📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?

ತುಳುನಾಡ ಸಾರಥಿ ಯೋಗಿಶ್ ಶೆಟ್ಟಿ ಜಪ್ಪುಗೆ ಜೆಡಿಎಸ್‌ನಲ್ಲಿ ಮಹತ್ವದ ಹೊಣೆಗಾರಿಕೆಯನ್ನು ಕಲ್ಪಿಸಲಾಗಿದ್ದು,  ಸಮಾಜಸೇವೆಯಿಂದ ರಾಜಕೀಯದವರೆಗಿನ ಮೂರು ದಶಕಗಳ ಹೋರಾಟದ ಪಯಣಕ್ಕೆ ಪ್ರತಿಫಲ ಸಿಗಲಾರಂಬಿಸಿತು ಅಂದುಕೊಳ್ಳೋಣ.

ದಕ್ಷಿಣ ಕನ್ನಡ ರಾಜಕೀಯ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ, ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ ಯೋಗಿಶ್ ಶೆಟ್ಟಿ ಜಪ್ಪು ಅವರು ಇದೀಗ ಜನತಾದಳ (ಜಾತ್ಯಾತೀತ) ಪಕ್ಷದಲ್ಲಿ ಮತ್ತೊಮ್ಮೆ ಸಕ್ರಿಯರಾಗಿದ್ದಷ್ಟೇ ಅಲ್ಲ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

1997ರಲ್ಲಿ ಜಪ್ಪು ಪ್ರದೇಶದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತನ್ನ ಪ್ರಭಾವವನ್ನು ತೋರಿಸಿದ ಯೋಗಿಶ್ ಶೆಟ್ಟಿ ಜಪ್ಪು, ಬಳಿಕ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ J. H. Patel ಅವರ ಉಪಸ್ಥಿತಿಯಲ್ಲಿ ಅವಿಭಜಿತ ಜನತಾದಳಕ್ಕೆ ಸೇರ್ಪಡೆಯಾದರು.

ಅದರ ನಂತರ ರಾಜಕೀಯದಲ್ಲಿ ನಿರಂತರವಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದ ಅವರು, ವಿದ್ಯಾರ್ಥಿ ಜನತಾದಳದ ಅವಿಭಜಿತ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಬಳಿಕ ಯುವ ಜನತಾದಳ ಅಧ್ಯಕ್ಷರೊಂದಿಗೆ ಕಾರ್ಯನಿರ್ವಹಿಸಿ, ಯುವ ಜನತಾದಳ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಸಂಚಾಲಕ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದರು. ನಂತರ ರಾಜ್ಯ ವಿದ್ಯಾರ್ಥಿ ಜನತಾದಳದ ಉಪಾಧ್ಯಕ್ಷರಾಗಿ ತಮ್ಮ ಸಂಘಟನಾ ಸಾಮರ್ಥ್ಯವನ್ನು ತೋರಿದರು.

ಮಂಗಳೂರಿನಲ್ಲಿ ಕಾರ್ಪರೇಟರ್ ಆಗಿ ಸೇವೆ ಸಲ್ಲಿಸಿದ ಅವರು, ಸುಮಾರು ಎರಡು ದಶಕಗಳ ಕಾಲ ಜನತಾದಳ ಪಕ್ಷದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿದ್ದರು.
ರಾಜಕೀಯದ ಜೊತೆಗೆ ಸಮಾಜಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡ ಯೋಗಿಶ್ ಶೆಟ್ಟಿ ಜಪ್ಪು, ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಯುವ ಸಾಧಕ ಪ್ರಶಸ್ತಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ತುಳುನಾಡಿನಲ್ಲಿ ತುರುವೇ ಎಂಬ ಪ್ರಭಲ ಸಂಘಟನೆಯೊಂದನ್ನು ಸ್ಥಾಪಿಸಿದ ಅವರು, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸಿ ಜನಮನ ಗೆದ್ದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ಹೋರಾಟದಲ್ಲಿಯೂ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದು ಇತಿಹಾಸ.

ವಿಶೇಷವಾಗಿ ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ 62 ದಿನಗಳ ಕಾಲ ಹಸಿದವರಿಗೆ ಅನ್ನದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದು, ಜನರಿಂದ “ತುಳುನಾಡ ಸಾರಥಿ” ಎಂಬ ಬಿರುದನ್ನು ಪಡೆದಿದ್ದಾರೆ.

ಇತ್ತೀಚಿಗೆ ಜನತಾದಳ (ಜಾತ್ಯಾತೀತ) ಪಕ್ಷದಲ್ಲಿ ಮರು ಸಕ್ರಿಯಗೊಂಡಿರುವ ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ, ಮಹತ್ವದ ಜವಾಬ್ದಾರಿ ದೊರೆತಿರುವುದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರಲ್ಲಿ ಹೊಸ ನಾಯಕತ್ವದ  ಆಶಾಕಿರಣವನ್ನು ಮೂಡಿಸಿದೆ. ಅವರ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಹಾಗೂ ಜನಪರ ಹೋರಾಟಗಳು ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವು ಜೆಡಿಎಸ್ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.