📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 

ಬೆಂಗಳೂರು: Kempegowda International Airport ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಮಹತ್ವದ ಕಾರ್ಯಾಚರಣೆ ನಡೆಸಿ, ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನೊಬ್ಬನ ಬ್ಯಾಗ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 47 ಜೀವಂತ ಅಪರೂಪದ ಪ್ರಾಣಿಗಳನ್ನು ಪತ್ತೆಹಚ್ಚಿದ್ದಾರೆ. ಈ ಘಟನೆ ವಿಮಾನ ನಿಲ್ದಾಣದ ಭದ್ರತಾ ಮತ್ತು ಕಸ್ಟಮ್ಸ್ ತಪಾಸಣೆಯ ವೇಳೆ ಬೆಳಕಿಗೆ ಬಂದಿದೆ.

ಅಧికారಿಗಳ ಮಾಹಿತಿಯ ಪ್ರಕಾರ, ಪ್ರಯಾಣಿಕನ ಲಗೇಜ್‌ ಪರಿಶೀಲಿಸುವಾಗ ಅದರೊಳಗೆ ವಿವಿಧ ಜಾತಿಯ ಅಪರೂಪದ ಪ್ರಾಣಿಗಳು ಮತ್ತು ಸರಿಸೃಪಗಳನ್ನು ಗುಪ್ತವಾಗಿ ಇರಿಸಲಾಗಿತ್ತು. ಪತ್ತೆಯಾದ ಜೀವಿಗಳಲ್ಲಿ ರೆಡ್-ಫುಟೆಡ್ ಟಾರ್ಟಾಯಿಸ್, ಆಫ್ರಿಕನ್ ಸ್ಪರ್ಡ್ ಟಾರ್ಟಾಯಿಸ್, ಅರ್ಜೆಂಟಿನಾ ಬ್ಲಾಕ್ ಅಂಡ್ ವೈಟ್ ಟೆಗು ಹಾಗೂ ಗೋಲ್ಡೀಸ್ ಮಾರ್ಮೊಸೆಟ್ ಎಂಬ ಅಪರೂಪದ ಕೋತಿಗಳ ಜಾತಿಯೂ ಸೇರಿವೆ. ಈ ಎಲ್ಲಾ ಪ್ರಾಣಿಗಳನ್ನು ಸೂಕ್ತ ಅನುಮತಿ ಇಲ್ಲದೆ ದೇಶಕ್ಕೆ ತರಲು ಯತ್ನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ತೆಯಾದ ಕೆಲವು ಪ್ರಾಣಿಜಾತಿಗಳು Convention on International Trade in Endangered Species of Wild Fauna and Flora (CITES) ಒಪ್ಪಂದದ ಅಪೆಂಡಿಕ್ಸ್-II ಪಟ್ಟಿಯಲ್ಲಿ ಸೇರಿವೆ. ಈ ಪಟ್ಟಿಯಲ್ಲಿರುವ ಜೀವಿಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರ ಮಾಡಲು ಕಠಿಣ ನಿಯಮಗಳು ಅನ್ವಯಿಸುತ್ತವೆ. ಇಂತಹ ಪ್ರಾಣಿಗಳ ಅಕ್ರಮ ಸಾಗಣೆ ಜೀವ ವೈವಿಧ್ಯತೆ ಹಾಗೂ ಪರಿಸರ ಸಮತೋಲನಕ್ಕೆ ಗಂಭೀರ ಅಪಾಯ ಉಂಟುಮಾಡುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಪ್ರಕರಣ ಸಂಬಂಧ Customs Act, 1962 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಆರೋಪಿಯನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅರಣ್ಯಾಧಿಕಾರಿ (RFO) ಅವರ ವಶಕ್ಕೆ ಒಪ್ಪಿಸಲಾಗಿದೆ. ಮುಂದಿನ ತನಿಖೆ Wildlife (Protection) Act, 1972 ಅಡಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಅಪರೂಪದ ಪ್ರಾಣಿಗಳು ಮತ್ತು ಪಕ್ಷಿಗಳನ್ನು ವಿದೇಶಗಳಿಂದ ಅಕ್ರಮವಾಗಿ ಸಾಗಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಹಾಗೂ ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿದೆ. ಈ ಕಾರ್ಯಾಚರಣೆ ಮೂಲಕ ದೊಡ್ಡ ಪ್ರಮಾಣದ ಅಕ್ರಮ ವನ್ಯಜೀವಿ ಸಾಗಣೆ ಜಾಲದ ಸುಳಿವು ಸಿಕ್ಕಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

##KempegowdaInternationalAirport #BengaluruCustoms #WildlifeSmuggling #CITES #BangkokFlight

COMMENTS

Login with Gmail to comment

ಇನ್ನಷ್ಟು ಸುದ್ದಿ

80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
“ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ