📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..

    ಸಮಾಜದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಗೆ ಎಚ್ಚರಿಕೆ

    ಬೆಳ್ಳಾರೆ/ಸವಣೂರು:
    ಸಾಮಾನ್ಯವಾಗಿ ಸ್ನೇಹ ಮತ್ತು ನಂಬಿಕೆಯಿಂದ ಆರಂಭವಾಗುವ ಹಣಕಾಸಿನ ವ್ಯವಹಾರಗಳು ಕೆಲವೊಮ್ಮೆ ಭಯಾನಕ ಪರಿಣಾಮಗಳಿಗೆ ಕಾರಣವಾಗುತ್ತಿವೆ. ಅದಕ್ಕೆ ಸರಿಯಾಗಿ ಮಾರುಕಟ್ಟೆಯು ವ್ಯವಹಾರಗಳಿಲ್ಲದೆ ವಿಪರೀತ ಆರ್ಥಿಕ ನಷ್ಟ ಉಂಟಾಗಿ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯೆ ಗಳಂತಹ ನಿರ್ಧಾರಗಳಿಗೆ ಬಲಿಯಾಗ್ತಿರೋ ಆರ್ಥಿಕ ಪರಿಸ್ಥಿತಿ ನಡುವೆ ಪೂರಕವಾಗಿ ಸವಣೂರು ಪೇಟೆಯಲ್ಲಿ ನಡೆದ ಹಲ್ಲೆ ಪ್ರಕರಣ ಗಮನ ಸೆಳೆದಿದೆ.

    ಕೇವಲ ₹50 ಸಾವಿರ ಸಾಲದ ವಿಚಾರವಾಗಿ ಉಂಟಾದ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ಹಿಂಸೆಗೆ ತಿರುಗಿ, ಸಾರ್ವಜನಿಕರ ಮುಂದೆ ರಕ್ತಸಿಕ್ತ ಘಟನೆಯಾಗಿ ಪರಿಣಮಿಸಿದೆ.

    ಕುದ್ಮಾರು ಅಂಚೆ ಕಡಬ ನಿವಾಸಿಯಾದ ಮೋನಪ್ಪ ಗೌಡ (32) ಎಂಬವರು ಮೊಟ್ಟೆ ಲೈನ್ ಸೇಲ್ ವ್ಯಾಪಾರ ಮಾಡಿಕೊಂಡಿದ್ದು, ಸುಮಾರು ಒಂದು ವರ್ಷಗಳ ಹಿಂದೆ ತಮ್ಮ ಪರಿಚಯದ ಮೋಕ್ಷಿತ್ ಇಡ್ಯಾಡಿ ಎಂಬವರಿಗೆ ₹50,000 ಸಾಲವಾಗಿ ನೀಡಿದ್ದರು. ಆದರೆ ದೀರ್ಘಕಾಲವಾದರೂ ಹಣ ಮರಳಿ ಸಿಗದ ಹಿನ್ನೆಲೆಯಲ್ಲಿ ಮೋನಪ್ಪ ಗೌಡರು ಹಲವಾರು ಬಾರಿ ಕೇಳಿದ್ದರೂ ಯಾವುದೇ ಸ್ಪಷ್ಟ ಉತ್ತರ ಸಿಕ್ಕಿರಲಿಲ್ಲ ಎನ್ನಲಾಗಿದೆ.

    ಘಟನೆ ಹೇಗೆ ನಡೆದಿದೆ?

    07 ಮಾರ್ಚ್ 2026ರಂದು ಸಂಜೆ ತಮ್ಮ ವ್ಯಾಪಾರದ ಕೆಲಸಕ್ಕಾಗಿ ಸವಣೂರು ಪೇಟೆಗೆ ಬಂದಿದ್ದ ಮೋನಪ್ಪ ಗೌಡರು, ಅಲ್ಲಿನ ಬಾಬು ಬೇಕರಿಅಂಗಡಿಯಲ್ಲಿ ಮೋಕ್ಷಿತ್ ಇರುವುದನ್ನು ಕಂಡು ನೇರವಾಗಿ ಅಂಗಡಿಗೆ ತೆರಳಿ ಹಣವನ್ನು ವಾಪಾಸು ನೀಡುವಂತೆ ಕೇಳಿದ್ದಾರೆ.

    ಆದರೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ತಿಳಿದುಬಂದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದರಿಂದ ಮೋನಪ್ಪ ಗೌಡರು ಅಲ್ಲಿಂದ ಹೊರಟು ತಮ್ಮ ವಾಹನದ ಬಳಿ ಹೋಗಿ ಕುಳಿತುಕೊಳ್ಳಲು ಯತ್ನಿಸಿದ ವೇಳೆ, ಮೋಕ್ಷಿತ್ ಮತ್ತು ಅವನ ತಮ್ಮ ರಂಜಿತ್ ಹಿಂಬದಿಯಿಂದ ಬಂದು ಮರದ ದೊಣ್ಣೆಯಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ವೇಳೆ ಮೋನಪ್ಪ ಗೌಡರ ಅಣ್ಣ ನಾರಾಯಣ ಗೌಡ ಮಧ್ಯಪ್ರವೇಶಿಸಲು ಬಂದಾಗ, ರಂಜಿತ್ ಅವರನ್ನು ಎಳೆದಾಡಿ ತಳ್ಳಾಟ ನಡೆಸಿದ್ದಾನೆ ಎನ್ನಲಾಗಿದೆ. ಅಷ್ಟರಲ್ಲಿ ಸ್ಥಳಕ್ಕೆ ಸಾರ್ವಜನಿಕರು ಸೇರುವುದನ್ನು ಕಂಡ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    ಪ್ರಕರಣ ದಾಖಲು

    ಈ ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 20/2026 ದಾಖಲಾಗಿ, ಕಲಂ 352, 118(1) ಜೊತೆಗೆ 3(5) BNS-2023 ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹಣಕಾಸಿನ ವಿವಾದಗಳು ಮತ್ತು ವೈಯಕ್ತಿಕ ಅಹಂಕಾರದಿಂದ ಸಣ್ಣ ವಿಷಯಗಳೂ ಹಿಂಸೆಗೆ ತಿರುಗುತ್ತಿರುವುದು ಆತಂಕಕಾರಿ ಬೆಳವಣಿಗೆ.

    ಈ ಘಟನೆ ಕೆಲವು ಕಠಿಣ ಪ್ರಶ್ನೆಗಳನ್ನು ಎತ್ತಿದೆ,ಹಣದ ವ್ಯವಹಾರಗಳಲ್ಲಿ ನಂಬಿಕೆ ಕುಸಿಯುತ್ತಿದೆಯೇ?ಮಾತಿನ ಜಗಳಗಳು ಏಕೆ ಕ್ಷಣಾರ್ಧದಲ್ಲಿ ಹಿಂಸೆಗೆ ತಿರುಗುತ್ತಿವೆ?ಸಾರ್ವಜನಿಕ ಸ್ಥಳಗಳಲ್ಲೇ ಹಲ್ಲೆಗಳು ನಡೆಯುವುದು ಕಾನೂನು ಭಯ ಕಡಿಮೆಯಾಗಿದೆ ಎನ್ನುವುದೇ?

    ಈ ರೀತಿಯ ಘಟನೆಗಳು ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಪೇಟೆ ಪ್ರದೇಶಗಳಲ್ಲೇ ಹಲ್ಲೆಗಳು ನಡೆದರೆ ಜನರಲ್ಲಿ ಆತಂಕ ಹೆಚ್ಚಾಗುತ್ತದೆ. ವ್ಯಾಪಾರಿಗಳ ನಡುವೆ ನಂಬಿಕೆ ಕಡಿಮೆಯಾಗುವುದು,ಸಾಲ ಮತ್ತು ವ್ಯವಹಾರ ಸಂಬಂಧಗಳಲ್ಲಿ ಅನುಮಾನಗಳು ಹೆಚ್ಚಾಗುತ್ತವೆ.ಸಮಸ್ಯೆಗಳನ್ನು ಸಂಭಾಷಣೆ ಅಥವಾ ಕಾನೂನು ಮೂಲಕ ಬಗೆಹರಿಸುವ ಬದಲು ಶಕ್ತಿಯ ಮೂಲಕ ಬಗೆಹರಿಸಲು ಯತ್ನಿಸುವ ಪ್ರವೃತ್ತಿ ಹೆಚ್ಚಬಹುದು.

    ಹಣಕಾಸಿನ ವ್ಯವಹಾರಗಳಲ್ಲಿ ಬರವಣಿಗೆಯ ದಾಖಲೆ ಮತ್ತು ಕಾನೂನುಬದ್ಧ ಒಪ್ಪಂದಗಳು ಅಗತ್ಯ. ಸಮಸ್ಯೆಗಳು ಉಂಟಾದರೆ ಪೊಲೀಸ್ ಅಥವಾ ನ್ಯಾಯಾಂಗ ಮಾರ್ಗವನ್ನು ಅನುಸರಿಸುವುದು ಸಮಾಜದ ಶಾಂತಿಯನ್ನು ಉಳಿಸಲು ಮುಖ್ಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಗೃಹಿಣಿ ಅಲ್ಲ, ರಾಷ್ಟ್ರ ನಿರ್ಮಾಣಕಾರಿ”ಮನೆಯ ಕೆಲಸ ಕೆಲಸವೇ ಅಲ್ಲ ಎನ್ನುವವರೇ… ಈ ಸುದ್ದಿ ಒಮ್ಮೆ ಓದಿ!ಆಕೆಯ ಶ್ರಮಕ್ಕೆ-₹30,000 ಮೌಲ್ಯ!– ಸುಪ್ರೀಂ ಕೋರ್ಟ್ ಮಹತ್ವದ ಸಂದೇಶ
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ಬಲೆಗೆ ಮತ್ತೋರ್ವ ಪ್ರಮುಖ ಆರೋಪಿ; ಬಂಧಿತರ ಸಂಖ್ಯೆ 25ಕ್ಕೆ ಏರಿಕೆ
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?