📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!

    ರಾಜಸ್ಥಾನದ ಜೈಪುರದಲ್ಲಿ ನಡೆದ ಈ ಭೀಕರ ಮತ್ತು ರಕ್ತಸಿಕ್ತ ಘಟನೆ ಇಡೀ ಮಾನವ ಕುಲವೇ ತಲೆತಗ್ಗಿಸುವಂತೆ ಮಾಡಿದೆ. ಸರ್ಕಾರಿ ಕೆಲಸ ಮತ್ತು ಆಸ್ತಿಗಾಗಿ ಹೆತ್ತ ಮಗಳೇ ತನ್ನ ತಾಯಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಈ ದುರಂತ ಜೈಪುರದ ಪ್ರತಾಪ್ ನಗರದಲ್ಲಿ ಜುಲೈ 3 ರಂದು ನಡೆದಿದೆ. 

    ನ್ಯಾಯಾಲಯದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC) ಆಗಿ ಕೆಲಸ ಮಾಡುತ್ತಿದ್ದ 45 ವರ್ಷದ ನೀರಜ್ ಶರ್ಮಾ ಎಂಬಾಕೆಯನ್ನು ಆಕೆಯ 23 ವರ್ಷದ ಮಗಳು ಆಯುಷಿ ಶರ್ಮಾ ಹಂತಕರಿಗೆ 7 ಲಕ್ಷ ರೂಪಾಯಿ ಸುಪಾರಿ ನೀಡಿ, ಸ್ಕಾರ್ಪಿಯೋ ಕಾರ್‌ನಿಂದ ಗುದ್ದಿಸಿ ಬಲಿ ಪಡೆದಿದ್ದಾಳೆ.

    ಘಟನೆಯ ಹಿನ್ನೆಲೆ ಮತ್ತು ಕ್ರೂರ ಸಂಚು

    ಮೃತ ನೀರಜ್ ಶರ್ಮಾ ಅವರ ಪತಿ ವಿಜಯ್ ಕುಮಾರ್ ಶರ್ಮಾ ಒಂದು ವರ್ಷದ ಹಿಂದೆ ನಿಧನರಾಗಿದ್ದರು. ಪತಿಯ ಸಾವಿನ ನಂತರ ಅನುಕಂಪದ ಆಧಾರದ ಮೇಲೆ (Compassionate Grounds) ನೀರಜ್ ಶರ್ಮಾ ಅವರಿಗೆ ಕೋರ್ಟ್‌ನಲ್ಲಿ ಸರ್ಕಾರಿ ಕೆಲಸ ಸಿಕ್ಕಿತ್ತು. ಆದರೆ ಈ ಸರ್ಕಾರಿ ಕೆಲಸ ತನಗೇ ಸಿಗಬೇಕೆಂದು ಮಗಳು ಆಯುಷಿ ಪಟ್ಟು ಹಿಡಿದಿದ್ದಳು. ತಾಯಿ ತನಗೆ ಕೆಲಸ ಬಿಟ್ಟುಕೊಡದಿದ್ದಕ್ಕೆ ಆಕೆ ತಾಯಿಯ ಮೇಲೆಯೇ ತೀವ್ರ ದ್ವೇಷ ಸಾಧಿಸಲು ಶುರುಮಾಡಿದ್ದಳು. ಇದರೊಂದಿಗೆ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿವಾದವೂ ಇವರಿಬ್ಬರ ನಡುವೆ ಇತ್ತು. ಹೇಗಾದರೂ ಮಾಡಿ ತಾಯಿಯನ್ನು ಮುಗಿಸಿದರೆ ಅನುಕಂಪದ ಆಧಾರದ ಮೇಲೆ ಆ ಕೆಲಸ ಮತ್ತು ಆಸ್ತಿ ಎರಡೂ ತನಗೆ ಸಿಗುತ್ತದೆ ಎಂದು

    ಅಪಘಾತದಂತೆ ಬಿಂಬಿಸಲು ಯತ್ನ

    ತಾಯಿಯ ಹತ್ಯೆಯನ್ನು ಯಾರಿಗೂ ಅನುಮಾನ ಬಾರದಂತೆ ಕೇವಲ ಒಂದು “ಹಿಟ್ ಅಂಡ್ ರನ್” ರಸ್ತೆ ಅಪಘಾತ ಎಂದು ಬಿಂಬಿಸಲು ಆಯುಷಿ ಯೋಜಿಸಿದ್ದಳು. ಇದಕ್ಕಾಗಿ ಆಕೆ ಭರತ್‌ಪುರದ ಹೇಮಂತ್ ಶರ್ಮಾ ಎಂಬ ಹಂತಕನಿಗೆ 7 ಲಕ್ಷ ರೂ. ಸುಪಾರಿ ನೀಡಿದ್ದಳು. ಜುಲೈ 3 ರಂದು ಸಂಜೆ 4:45 ಕ್ಕೆ ನೀರಜ್ ಶರ್ಮಾ ಅವರು ತಮ್ಮ ವಿಕಲಚೇತನ ಮಗನನ್ನು ಕೋಚಿಂಗ್ ಕ್ಲಾಸ್‌ಗೆ ಬಿಟ್ಟು ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದಾಗ, ಸುಮಾರು 130 ಕಿಮೀ ವೇಗದಲ್ಲಿ ಬಂದ ಸ್ಕಾರ್ಪಿಯೋ ಎಸ್‌ಯುವಿ ಆಕೆಗೆ ಜೋರಾಗಿ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ನೀರಜ್ ಅವರ ದೇಹ ಗಾಳಿಯಲ್ಲಿ 100 ಅಡಿ ದೂರಕ್ಕೆ ಹಾರಿ ಬಿದ್ದು, ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಇದು ಅಪಘಾತ ಎಂದು ಭಾವಿಸಲಾಗಿತ್ತಾದರೂ, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕಾರು ಉದ್ದೇಶಪೂರ್ವಕವಾಗಿ ವೇಗವನ್ನು ಹೆಚ್ಚಿಸಿ ಡಿಕ್ಕಿ ಹೊಡೆದಿರುವುದು ಪತ್ತೆಯಾಗಿ, ಇಡೀ ಜಾಲ ಬಯಲಾಗಿದೆ.

    ಆಯುಷಿ ಮಾನಸಿಕತೆ – ದುರಾಸೆಯ ಪರಮಾವಧಿ:

    ಪೊಲೀಸ್ ತನಿಖೆಯ ವೇಳೆ ಆಯುಷಿಯ ವಿಕೃತ ಮಾನಸಿಕತೆ ಮತ್ತು ಕ್ರೌರ್ಯ ಎಂಥವರನ್ನೂ ಬೆಚ್ಚಿಬೀಳಿಸುವಂತಿದೆ. ತನ್ನ ಹೆತ್ತ ತಾಯಿ ಸಾವನ್ನಪ್ಪಿದಾಗ ಪೊಲೀಸರು ಹಾಗೂ ಸಾರ್ವಜನಿಕರ ಮುಂದೆ ಆಕೆ ಸುಳ್ಳು ಕಣ್ಣೀರು ಸುರಿಸುತ್ತಾ ತನಗೇನೂ ತಿಳಿಯದಂತೆ ನಾಟಕವಾಡಿದ್ದಳು. ತನಿಖೆಯಲ್ಲಿ ತಿಳಿದುಬಂದಂತೆ ಆಕೆ ಕೊಲೆಗೂ ಮುನ್ನ ತಾಯಿಯನ್ನು ಮಾನಸಿಕವಾಗಿ ಕುಗ್ಗಿಸಲು ಮಾಟಮಂತ್ರಗಳ ಮೊರೆ ಕೂಡ ಹೋಗಿದ್ದಳು! ತನ್ನ ಸ್ವಂತ ವಿಕಲಚೇತನ ಸಹೋದರನ ಭವಿಷ್ಯದ ಬಗ್ಗೆಯೂ ಯೋಚಿಸದ ಆಯುಷಿ, ಕೇವಲ ಐಷಾರಾಮಿ ಜೀವನದ ಆಸೆ ಹಾಗೂ ದುರಾಸೆಯಿಂದ ಕುರುಡಿಯಾಗಿದ್ದಳು. “ತಾಯಿ ನನ್ನ ಸರ್ಕಾರಿ ಕೆಲಸವನ್ನು ಕಿತ್ತುಕೊಂಡು ನನ್ನ ಭವಿಷ್ಯ ಹಾಳು ಮಾಡಿದಳು” ಎಂದು ಆಕೆ ಕೊಲೆಯನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ಆಕೆಯ ಮನಸ್ಸು ವಿಕೃತಗೊಂಡಿತ್ತು. ಪ್ರಸ್ತುತ ಜೈಪುರ ಪೊಲೀಸರು ಆಯುಷಿ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮ ಕೈಗೊಂಡಿದ್ದಾರೆ.

    ##JaipurMurderCase #CrimeNewsKannada #SupariKilling #PropertyDispute #ShockingCrime

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ