📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!

    ದುಡಿದು ತಿನ್ನಲಾಗದ ಸೋಮಾರಿಗಳ ನೂರೆಂಟ್ ತಂತ್ರ: ಎಚ್ಚರವೇ ಏಕೈಕ ಮದ್ದು

    ಸ್ವಂತ ಶ್ರಮದಿಂದ ದುಡಿದು ಬದುಕಲು ಯೋಗ್ಯತೆ ಇಲ್ಲದ ಹಾಗೂ ಕಷ್ಟಪಟ್ಟು ಕೆಲಸ ಮಾಡಲು ಇಷ್ಟಪಡದ ಇಂತಹ ವಂಚಕರು, ಇತರರ ಹಣವನ್ನು ದೋಚಲು ದಿನಕ್ಕೊಂದು ನೂರು ಸುಳ್ಳು ಉಪಾಯಗಳನ್ನು (Ideas) ಹೂಡುತ್ತಿರುತ್ತಾರೆ. ಇಂತಹ ಘಟನೆಗಳ ಬಗ್ಗೆ ಮಾಧ್ಯಮಗಳು ಜನರನ್ನು ಜಾಗೃತಗೊಳಿಸಲು ನಿರಂತರವಾಗಿ ವರದಿಗಳನ್ನು ಪ್ರಸಾರ ಮಾಡುತ್ತಲೇ ಇರುತ್ತವೆ. ಆದರೂ ಸಾರ್ವಜನಿಕರ ಸಣ್ಣ ನಿರ್ಲಕ್ಷ್ಯ ದೊಡ್ಡ ಆಪತ್ತನ್ನು ತಂದೊಡ್ಡುತ್ತಿದೆ. ಯಾವುದೇ ಅಪರಿಚಿತ ವ್ಯಕ್ತಿ ಫೋನ್ ಕಾಲ್ ಅಥವಾ ಮೆಸೇಜ್ ಮೂಲಕ ಬ್ಯಾಂಕ್ ಅಥವಾ ಸಿಮ್ ನವೀಕರಣದ ಬಗ್ಗೆ ಮಾತನಾಡಿದರೆ ಆತುರದ ನಿರ್ಧಾರ ಕೈಗೊಳ್ಳಬೇಡಿ. ನಿಮಗೆ ಯಾವುದೇ ಸಣ್ಣ ಅನುಮಾನ ಬಂದರೂ ಫೋನ್‌ನಲ್ಲೇ ಪ್ರಕ್ರಿಯೆ ಮುಂದುವರಿಸುವ ಬದಲು, ತಕ್ಷಣವೇ ಸಂಬಂಧಪಟ್ಟ ಮೊಬೈಲ್ ನೆಟ್‌ವರ್ಕ್ ಸ್ಟೋರ್, ಬ್ಯಾಂಕ್ ಶಾಖೆ ಅಥವಾ ಕಚೇರಿಗೆ ನೇರವಾಗಿ ಭೇಟಿ ನೀಡಿ ಖಚಿತಪಡಿಸಿಕೊಳ್ಳಿ.ಯಾವುದೇ ಅನಗತ್ಯ link ಗಳನ್ನ open ಮಾಡುವುದರಿಂದಲೂ ph ನಲ್ಲಿರುವ ಎಲ್ಲಾ ಡೇಟಾ ಕಳ್ಳರ ಕೈಸೇರಿ ಅನಾಹುತಗಳಾಗುತ್ತವೆ ಎಚ್ಚರವಹಿಸಿ..!

    ಕಸ್ಟಮರ್ ಕೇರ್ ಹೆಸರಲ್ಲಿ ಗಾಳ: 23.98 ಲಕ್ಷ ರೂ. ಲೂಟಿ ಮಾಡಿದ ವಂಚಕರು

    ಮಂಗಳೂರಿನ ದೂರುದಾರರಿಗೆ ಜುಲೈ 8ರಂದು ಮೊಬೈಲ್ ಸಿಮ್ ಕಂಪನಿಯೊಂದರ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿ ಕರೆ ಮಾಡಿದ ವ್ಯಕ್ತಿಯೊಬ್ಬ, “ನಿಮ್ಮ ಸಿಮ್ ಕಾರ್ಡ್ ಪ್ರಸ್ತುತ 4ಜಿ ಸೇವೆಯಲ್ಲಿದ್ದು, ಅದನ್ನು 5ಜಿ ಗೆ ನವೀಕರಿಸಬೇಕು (SIM Upgrade)” ಎಂದು ನಂಬಿಸಿದ್ದಾನೆ. ಇದನ್ನು ನಿಜವೆಂದು ನಂಬಿದ ದೂರುದಾರರು ಅದಕ್ಕೆ ಒಪ್ಪಿಗೆ ಸೂಚಿಸಿದಾಗ, ವಂಚಕನು “ನವೀಕರಣ ಪ್ರಕ್ರಿಯೆಗಾಗಿ ನಿಮ್ಮ ನೆಟ್‌ವರ್ಕ್ ಕೆಲವು ಗಂಟೆಗಳ ಕಾಲ ನಿಷ್ಕ್ರಿಯಗೊಳ್ಳಲಿದೆ” ಎಂದು ತಿಳಿಸಿದ್ದಾನೆ. ನಂತರ ದೂರುದಾರರ ಇಮೇಲ್‌ಗೆ ಬಂದ ಒಂದು ಸಂದೇಶಕ್ಕೆ ವಂಚಕನ ಸೂಚನೆಯಂತೆ ಅವರು ಒಪ್ಪಿಗೆ (Yes) ನೀಡಿದ್ದಾರೆ. ತದನಂತರ ನೆಟ್‌ವರ್ಕ್ ಬಾರದಿದ್ದಾಗ ಬೇರೆ ನಂಬರ್‌ನಿಂದ ಕರೆ ಮಾಡಿ ವಿಚಾರಿಸಿದರೆ, “ಸರ್ವರ್ ಸಮಸ್ಯೆಯಿದ್ದು ಸದ್ಯದಲ್ಲೇ ಸರಿಹೋಗುತ್ತದೆ” ಎಂದು ವಂಚಕನು ಜುಲೈ 9ರ ಸಂಜೆಯವರೆಗೂ ಕಾಲಹರಣ ಮಾಡಿದ್ದಾನೆ.

    ಸಿಮ್ ನಿಷ್ಕ್ರಿಯತೆಯ ರಹಸ್ಯ ಮತ್ತು ಬ್ಯಾಂಕ್ ಖಾತೆಯಿಂದ ಲೋನ್ ಪಡೆದು ವಂಚನೆ

    ಕೊನೆಗೆ ಅನುಮಾನ ಬಂದು ದೂರುದಾರರು ಮೊಬೈಲ್ ಸಂಸ್ಥೆಯ ಸ್ಥಳೀಯ ಕಚೇರಿಗೆ ಹೋಗಿ ವಿಚಾರಿಸಿದಾಗ, ಅಂತಹ ಯಾವುದೇ ಕರೆ ಮಾಡುವ ಪದ್ಧತಿ ಕಂಪನಿಯಲ್ಲಿ ಇಲ್ಲ ಎಂಬ ಕಹಿ ಸತ್ಯ ತಿಳಿದುಬಂದಿದೆ. ಅವರು ತಕ್ಷಣವೇ ಮೊಬೈಲ್‌ನಲ್ಲಿದ್ದ ನಿಷ್ಕ್ರಿಯ ಸಿಮ್ ಹೊರಗೆ ತೆಗೆದಿದ್ದಾರೆ. ಆದರೆ ಜುಲೈ 10ರಂದು ಬೆಳಗ್ಗೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದಾಗ ಸೈಬರ್ ಖದೀಮರು ದೊಡ್ಡ ಆಘಾತ ನೀಡಿದ್ದರು. ವಂಚಕರು ದೂರುದಾರರ ಬ್ಯಾಂಕ್ ಖಾತೆಗಳಿಂದ 2,89,000 ರೂ. ನಗದು ಹಾಗೂ ಅವರ ಕ್ರೆಡಿಟ್ ಕಾರ್ಡ್ ಬಳಸಿ ಬರೋಬ್ಬರಿ 9,00,000 ರೂ. ಸಾಲವನ್ನು (Loan) ಪಡೆದುಕೊಂಡಿದ್ದರು. ಅಷ್ಟೇ ಅಲ್ಲದೆ, ಮತ್ತೊಂದು ಕ್ರೆಡಿಟ್ ಕಾರ್ಡ್‌ನಿಂದ 4,06,138 ರೂ. ಹಾಗೂ ಇತರೆ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್‌ಗಳಿಂದ 3,03,000 ರೂ. ಮತ್ತು 5,00,000 ರೂ. ಸೇರಿದಂತೆ ಒಟ್ಟು 23,98,138 ರೂ. ಗಳನ್ನು ವಿವಿಧ ನಕಲಿ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸದ್ಯ ಮಂಗಳೂರಿನ ಸೆನ್ (SEN) ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    ##CyberCrimeMangalore #SIMSwapScam #OnlineBankingFraud #CyberAwareness #FinancialFraudAlert

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    “ಬೇಕಾದರೇ ನನಗೆ ಪೊರಕೆಲಿ ಹೊಡಿರಿ ಆದ್ರೆ ಅಧಿಕಾರಿಗಳಿಗಲ್ಲ”- ಡಿಕೆಶಿ “ಭೂಮಿ ಉಳಿಸಿಕೊಳ್ಳಲು ಹೋರಾಡಿದ ರೈತರ ಮೇಲೆ ಕೊಲೆ ಕೇಸ್? ಬಿಡದಿ ವಿವಾದದ ಬಗ್ಗೆ ರಾಜ್ಯಾದ್ಯಂತ ಆಕ್ರೋಶ!
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್