📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!

ದುಡಿದು ತಿನ್ನಲಾಗದ ಸೋಮಾರಿಗಳ ನೂರೆಂಟ್ ತಂತ್ರ: ಎಚ್ಚರವೇ ಏಕೈಕ ಮದ್ದು

ಸ್ವಂತ ಶ್ರಮದಿಂದ ದುಡಿದು ಬದುಕಲು ಯೋಗ್ಯತೆ ಇಲ್ಲದ ಹಾಗೂ ಕಷ್ಟಪಟ್ಟು ಕೆಲಸ ಮಾಡಲು ಇಷ್ಟಪಡದ ಇಂತಹ ವಂಚಕರು, ಇತರರ ಹಣವನ್ನು ದೋಚಲು ದಿನಕ್ಕೊಂದು ನೂರು ಸುಳ್ಳು ಉಪಾಯಗಳನ್ನು (Ideas) ಹೂಡುತ್ತಿರುತ್ತಾರೆ. ಇಂತಹ ಘಟನೆಗಳ ಬಗ್ಗೆ ಮಾಧ್ಯಮಗಳು ಜನರನ್ನು ಜಾಗೃತಗೊಳಿಸಲು ನಿರಂತರವಾಗಿ ವರದಿಗಳನ್ನು ಪ್ರಸಾರ ಮಾಡುತ್ತಲೇ ಇರುತ್ತವೆ. ಆದರೂ ಸಾರ್ವಜನಿಕರ ಸಣ್ಣ ನಿರ್ಲಕ್ಷ್ಯ ದೊಡ್ಡ ಆಪತ್ತನ್ನು ತಂದೊಡ್ಡುತ್ತಿದೆ. ಯಾವುದೇ ಅಪರಿಚಿತ ವ್ಯಕ್ತಿ ಫೋನ್ ಕಾಲ್ ಅಥವಾ ಮೆಸೇಜ್ ಮೂಲಕ ಬ್ಯಾಂಕ್ ಅಥವಾ ಸಿಮ್ ನವೀಕರಣದ ಬಗ್ಗೆ ಮಾತನಾಡಿದರೆ ಆತುರದ ನಿರ್ಧಾರ ಕೈಗೊಳ್ಳಬೇಡಿ. ನಿಮಗೆ ಯಾವುದೇ ಸಣ್ಣ ಅನುಮಾನ ಬಂದರೂ ಫೋನ್‌ನಲ್ಲೇ ಪ್ರಕ್ರಿಯೆ ಮುಂದುವರಿಸುವ ಬದಲು, ತಕ್ಷಣವೇ ಸಂಬಂಧಪಟ್ಟ ಮೊಬೈಲ್ ನೆಟ್‌ವರ್ಕ್ ಸ್ಟೋರ್, ಬ್ಯಾಂಕ್ ಶಾಖೆ ಅಥವಾ ಕಚೇರಿಗೆ ನೇರವಾಗಿ ಭೇಟಿ ನೀಡಿ ಖಚಿತಪಡಿಸಿಕೊಳ್ಳಿ.ಯಾವುದೇ ಅನಗತ್ಯ link ಗಳನ್ನ open ಮಾಡುವುದರಿಂದಲೂ ph ನಲ್ಲಿರುವ ಎಲ್ಲಾ ಡೇಟಾ ಕಳ್ಳರ ಕೈಸೇರಿ ಅನಾಹುತಗಳಾಗುತ್ತವೆ ಎಚ್ಚರವಹಿಸಿ..!

ಕಸ್ಟಮರ್ ಕೇರ್ ಹೆಸರಲ್ಲಿ ಗಾಳ: 23.98 ಲಕ್ಷ ರೂ. ಲೂಟಿ ಮಾಡಿದ ವಂಚಕರು

ಮಂಗಳೂರಿನ ದೂರುದಾರರಿಗೆ ಜುಲೈ 8ರಂದು ಮೊಬೈಲ್ ಸಿಮ್ ಕಂಪನಿಯೊಂದರ ಕಸ್ಟಮರ್ ಕೇರ್ ಅಧಿಕಾರಿ ಎಂದು ಹೇಳಿ ಕರೆ ಮಾಡಿದ ವ್ಯಕ್ತಿಯೊಬ್ಬ, “ನಿಮ್ಮ ಸಿಮ್ ಕಾರ್ಡ್ ಪ್ರಸ್ತುತ 4ಜಿ ಸೇವೆಯಲ್ಲಿದ್ದು, ಅದನ್ನು 5ಜಿ ಗೆ ನವೀಕರಿಸಬೇಕು (SIM Upgrade)” ಎಂದು ನಂಬಿಸಿದ್ದಾನೆ. ಇದನ್ನು ನಿಜವೆಂದು ನಂಬಿದ ದೂರುದಾರರು ಅದಕ್ಕೆ ಒಪ್ಪಿಗೆ ಸೂಚಿಸಿದಾಗ, ವಂಚಕನು “ನವೀಕರಣ ಪ್ರಕ್ರಿಯೆಗಾಗಿ ನಿಮ್ಮ ನೆಟ್‌ವರ್ಕ್ ಕೆಲವು ಗಂಟೆಗಳ ಕಾಲ ನಿಷ್ಕ್ರಿಯಗೊಳ್ಳಲಿದೆ” ಎಂದು ತಿಳಿಸಿದ್ದಾನೆ. ನಂತರ ದೂರುದಾರರ ಇಮೇಲ್‌ಗೆ ಬಂದ ಒಂದು ಸಂದೇಶಕ್ಕೆ ವಂಚಕನ ಸೂಚನೆಯಂತೆ ಅವರು ಒಪ್ಪಿಗೆ (Yes) ನೀಡಿದ್ದಾರೆ. ತದನಂತರ ನೆಟ್‌ವರ್ಕ್ ಬಾರದಿದ್ದಾಗ ಬೇರೆ ನಂಬರ್‌ನಿಂದ ಕರೆ ಮಾಡಿ ವಿಚಾರಿಸಿದರೆ, “ಸರ್ವರ್ ಸಮಸ್ಯೆಯಿದ್ದು ಸದ್ಯದಲ್ಲೇ ಸರಿಹೋಗುತ್ತದೆ” ಎಂದು ವಂಚಕನು ಜುಲೈ 9ರ ಸಂಜೆಯವರೆಗೂ ಕಾಲಹರಣ ಮಾಡಿದ್ದಾನೆ.

ಸಿಮ್ ನಿಷ್ಕ್ರಿಯತೆಯ ರಹಸ್ಯ ಮತ್ತು ಬ್ಯಾಂಕ್ ಖಾತೆಯಿಂದ ಲೋನ್ ಪಡೆದು ವಂಚನೆ

ಕೊನೆಗೆ ಅನುಮಾನ ಬಂದು ದೂರುದಾರರು ಮೊಬೈಲ್ ಸಂಸ್ಥೆಯ ಸ್ಥಳೀಯ ಕಚೇರಿಗೆ ಹೋಗಿ ವಿಚಾರಿಸಿದಾಗ, ಅಂತಹ ಯಾವುದೇ ಕರೆ ಮಾಡುವ ಪದ್ಧತಿ ಕಂಪನಿಯಲ್ಲಿ ಇಲ್ಲ ಎಂಬ ಕಹಿ ಸತ್ಯ ತಿಳಿದುಬಂದಿದೆ. ಅವರು ತಕ್ಷಣವೇ ಮೊಬೈಲ್‌ನಲ್ಲಿದ್ದ ನಿಷ್ಕ್ರಿಯ ಸಿಮ್ ಹೊರಗೆ ತೆಗೆದಿದ್ದಾರೆ. ಆದರೆ ಜುಲೈ 10ರಂದು ಬೆಳಗ್ಗೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದಾಗ ಸೈಬರ್ ಖದೀಮರು ದೊಡ್ಡ ಆಘಾತ ನೀಡಿದ್ದರು. ವಂಚಕರು ದೂರುದಾರರ ಬ್ಯಾಂಕ್ ಖಾತೆಗಳಿಂದ 2,89,000 ರೂ. ನಗದು ಹಾಗೂ ಅವರ ಕ್ರೆಡಿಟ್ ಕಾರ್ಡ್ ಬಳಸಿ ಬರೋಬ್ಬರಿ 9,00,000 ರೂ. ಸಾಲವನ್ನು (Loan) ಪಡೆದುಕೊಂಡಿದ್ದರು. ಅಷ್ಟೇ ಅಲ್ಲದೆ, ಮತ್ತೊಂದು ಕ್ರೆಡಿಟ್ ಕಾರ್ಡ್‌ನಿಂದ 4,06,138 ರೂ. ಹಾಗೂ ಇತರೆ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್‌ಗಳಿಂದ 3,03,000 ರೂ. ಮತ್ತು 5,00,000 ರೂ. ಸೇರಿದಂತೆ ಒಟ್ಟು 23,98,138 ರೂ. ಗಳನ್ನು ವಿವಿಧ ನಕಲಿ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸದ್ಯ ಮಂಗಳೂರಿನ ಸೆನ್ (SEN) ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

##CyberCrimeMangalore #SIMSwapScam #OnlineBankingFraud #CyberAwareness #FinancialFraudAlert

COMMENTS

Login with Gmail to comment

ಇನ್ನಷ್ಟು ಸುದ್ದಿ

“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
“ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
ಅಮ್ಮಾ ಎದ್ದು ಬಾ… ಕಣ್ಣೀರಾಕಿ ಕರೆದರೂ, ಬರಲಾರದೇ ಒದ್ದಾಡಿದ ಅಮ್ಮ …ದುಬಾರೆ ಶಿಬಿರದಲ್ಲಿ ಮನಕಲುಕುವ ಘಟನೆ-ಆನೆಗಳ ಕಾದಾಟ… ಜೀವ ಕಳೆದುಕೊಂಡ ಮಹಿಳೆ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ