📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!

    ಒಂದೆಡೆ ಅರಬ್ಬೀ ಸಮುದ್ರದ ಅಲೆಗಳು…
    ಮತ್ತೊಂದೆಡೆ ಭಾರತದ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತ ಯುದ್ಧನೌಕೆ…
    ಮಧ್ಯದಲ್ಲಿ ದೇಶದ ಸಮುದ್ರ ಗಡಿಯನ್ನು ಕಾಪಾಡುವ ಭಾರತೀಯ ನೌಕಾಪಡೆ…ಶತ್ರು ಜಲಾಂತರ್ಗಾಮಿಗಳಿಗೆ ಮೌನವಾಗಿ ಬೇಟೆಯಾಡುವ ‘ಸೈಲೆಂಟ್ ಹಂಟರ್’! 

    Yes,‘ಕರ್ನಾಟಕದ ಕಾರವಾರದ INS ಕದಂಬ ನೌಕಾನೆಲೆಯಲ್ಲಿ ಭಾರತದ ನೌಕಾಪಡೆಗೆ ಮತ್ತೊಂದು ಶಕ್ತಿಶಾಲಿ ಯುದ್ಧನೌಕೆ ಸೇರ್ಪಡೆಯಾಗಿದೆ. ಮಾಹೆ ವರ್ಗದ ಎರಡನೇ ಆಂಟಿ-ಸಬ್‌ಮರಿನ್ ವಾರ್ಫೇರ್ ಶ್ಯಾಲೋವಾಟರ್ ಕ್ರಾಫ್ಟ್ (ASW-SWC) ‘INS Malvan’ ಅನ್ನು ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಲೋಕಾರ್ಪಣೆಗೊಳಿಸಿದರು. ಸಮುದ್ರ ಭದ್ರತೆ ಮತ್ತು ಸುರಕ್ಷಿತ ಸಮುದ್ರ ಮಾರ್ಗಗಳ ಮಹತ್ವವನ್ನು ಅವರು ಒತ್ತಿಹೇಳಿದ್ದಾರೆ. ಸಮುದ್ರ ಮಾರ್ಗಗಳು ವ್ಯಾಪಾರವನ್ನು ನಿರ್ಧರಿಸುತ್ತವೆ, ವ್ಯಾಪಾರವೇ ದೇಶದ ಆರ್ಥಿಕ ಭವಿಷ್ಯವನ್ನು ನಿರ್ಧರಿಸುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ. 

    ಕಾರವಾರದ INS ಕದಂಬದಲ್ಲಿ ಯುದ್ಧನೌಕೆಯ ಲೋಕಾರ್ಪಣೆ ನಡೆದಿರುವುದು ಇದೇ ಮೊದಲ ಬಾರಿಗೆ ಎಂಬುದು ಕರ್ನಾಟಕದ ಪಾಲಿಗೂ ಹೆಮ್ಮೆಯ ಕ್ಷಣವಾಗಿದೆ.ಆಧುನಿಕ ಯುದ್ಧಗಳಲ್ಲಿ ಸಮುದ್ರ, ಆಕಾಶ ಮತ್ತು ಭೂಮಿ — ಮೂರು ಕ್ಷೇತ್ರಗಳ ನಡುವಿನ ಸಮನ್ವಯವೇ ಭಾರತದ ಭದ್ರತೆಯ ಪ್ರಮುಖ ಅಸ್ತ್ರವಾಗಲಿದೆ. 

    ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿರುವ ಈ ನೌಕೆಯಲ್ಲಿ ಶೇ.80ಕ್ಕೂ ಹೆಚ್ಚು ಸ್ವದೇಶಿ ಉಪಕರಣಗಳು ಬಳಕೆಯಾಗಿವೆ. 78.8 ಮೀಟರ್ ಉದ್ದ ಹಾಗೂ 1,150 ಟನ್ ತೂಕದ ಈ ಯುದ್ಧನೌಕೆ, ಕರಾವಳಿ ಕಣ್ಗಾವಲು ಮತ್ತು ಆಳವಿಲ್ಲದ ನೀರಿನಲ್ಲಿ ಶತ್ರು ಜಲಾಂತರ್ಗಾಮಿಗಳನ್ನು ಪತ್ತೆಹಚ್ಚಿ ಎದುರಿಸಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

    30 ಎಂಎಂ ನೇವಲ್ ಗನ್, ಟಾರ್ಪಿಡೊ ಲಾಂಚರ್‌ಗಳು, ರಾಕೆಟ್ ಲಾಂಚರ್‌ಗಳು, ‘ಅಭಯ್’ ಸೋನಾರ್ ಹಾಗೂ ಅತ್ಯಾಧುನಿಕ ಯುದ್ಧ ನಿರ್ವಹಣಾ ವ್ಯವಸ್ಥೆಗಳನ್ನು ಹೊಂದಿರುವ INS Malvan, ಭಾರತದ ಸಮುದ್ರ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಿದೆ.

    ಮಹಾರಾಷ್ಟ್ರದ ಐತಿಹಾಸಿಕ ಕರಾವಳಿ ಪಟ್ಟಣ ಮಾಲ್ವಣ್ ಹೆಸರನ್ನು ಪಡೆದಿರುವ ಈ ನೌಕೆ, ಛತ್ರಪತಿ ಶಿವಾಜಿ ಮಹಾರಾಜರ ಶಕ್ತಿಶಾಲಿ ಕಡಲ ಪರಂಪರೆಗೆ ಗೌರವ ಸಲ್ಲಿಸುತ್ತದೆ. ನೌಕೆಯ ಚಿಹ್ನೆಯಲ್ಲಿರುವ ‘ಬಾಘ್ ನಖ್’ ಧೈರ್ಯ ಮತ್ತು ಚುರುಕುತನದ ಸಂಕೇತವಾಗಿದೆ.ನೌಕೆಯ ಚಿಹ್ನೆಯಲ್ಲಿ ಬಳಸಲಾಗಿರುವ ‘ಬಾಘ್ ನಖ್’ ಅಥವಾ ಹುಲಿಯ ಉಗುರು ಧೈರ್ಯ, ವೇಗ ಮತ್ತು ಚುರುಕುತನದ ಸಂಕೇತವಾಗಿದೆ. ಶತ್ರುವಿನ ಮೇಲೆ ನಿಖರವಾಗಿ ದಾಳಿ ನಡೆಸುವ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಈ ಚಿಹ್ನೆ, ಛತ್ರಪತಿ ಶಿವಾಜಿ ಮಹಾರಾಜರ ಯುದ್ಧಪರಂಪರೆಯೊಂದಿಗೆ ಭಾವನಾತ್ಮಕ ಸಂಪರ್ಕವನ್ನೂ ಹೊಂದಿದೆ.

    ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ ಭಾರತ’ದ ಹೆಮ್ಮೆಯ ಪ್ರತೀಕವಾಗಿರುವ INS Malvan, ಭಾರತದ ಕರಾವಳಿ ಭದ್ರತೆ, ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆ ಹಾಗೂ ಸುರಕ್ಷಿತ ಸಮುದ್ರ ವ್ಯಾಪಾರಕ್ಕೆ ಹೊಸ ಬಲ ನೀಡಲಿದೆ.

    ಕಾರವಾರದ ನೆಲದಿಂದ ಭಾರತದ ಸಮುದ್ರಶಕ್ತಿಗೆ ಮತ್ತೊಂದು ಬಲಿಷ್ಠ ಕವಚ ಸೇರ್ಪಡೆಯಾಗಿದೆ!

    ##INS_Malvan #IndianNavy #Karwar #INSKadamba #MakeInIndia #AtmanirbharBharat #Karnataka Proud

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    🔥 ಬಿಸಿಲಿನ ಬಿಸಿ ತಾರಕ್ಕೇರಿದೆ, ಆದರೆ ಮಳೆ ಸಿಡಿಲು ಸರ್ಪ್ರೈಸ್ ಬರ್ತಿದೆ! 🌩️
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.