📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL)ಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (NMDC) ಜೊತೆ ವಿಲೀನಗೊಳಿಸಿ ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಬಂಡವಾಳ ಹೂಡಿಕೆ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಬೇಕು ಎಂದು ಆಗ್ರಹಿಸಿದರು. ಜಿಲ್ಲೆಗೆ ಭೇಟಿ ನೀಡಿ ಕೇಂದ್ರದ ಅಧೀನದಲ್ಲಿರುವ ಕೈಗಾರಿಕೆಗಳ ಅಭಿವೃದ್ಧಿ ಕಾರ್ಯಗಳನ್ನು ಖುದ್ದು ಪರಿಶೀಲಿಸಿ ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡುವಂತೆ ಕೋರಿದರು.

ರಾಜ್ಯ ಸರಕಾರವು KIOCLಗೆ ಗಣಿಗಾರಿಕೆಗೆ ಅನುಮತಿ ನೀಡದಿರುವುದರಿಂದ ಕಂಪನಿಯ ಕಾರ್ಯಾಚರಣೆಗೆ ತೀವ್ರ ತೊಡಕಾಗಿದೆ. ಇದರಿಂದ ಕಾರ್ಮಿಕರ ಭವಿಷ್ಯ ಅತಂತ್ರವಾಗಿದೆ. ಈ ಬಗ್ಗೆ ಕಳೆದ ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ರಾಜ್ಯ ಸರಕಾರದ ಮೇಲೆ ಕೇಂದ್ರವು ಒತ್ತಡ ಹೇರಬೇಕು ಎಂದು ಅವರು ಒತ್ತಾಯಿಸಿದರು

KIOCL ಅನ್ನು NMDC ಯೊಂದಿಗೆ ವಿಲೀನಗೊಳಿಸುವುದರಿಂದ ಕಂಪನಿಯ ಪುನಶ್ಚೇತನ ಸಾಧ್ಯವಾಗಲಿದೆ ಹಾಗೂ ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಡಾ. ಭರತ್ ಶೆಟ್ಟಿ ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಮತ್ತಿತರ ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ವಿವರವಾದ ಮನವಿ ಪತ್ರ ಸಲ್ಲಿಸಲಾಯಿತು ಎಂದು ಶಾಸಕರ ಕಚೇರಿಯಿಂದ ಮಾಹಿತಿ ಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!