📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”

    “‘ರಿಸರ್ವೇಶನ್ ಹಟಾವೋ’ ಅಭಿಯಾನ ದೇಶಾದ್ಯಂತ ಟ್ರೆಂಡ್… ಅತ್ತ ಹೈಕೋರ್ಟ್‌ನಲ್ಲಿ ನಕಲಿ ಜಾತಿ-ಆದಾಯ ಪ್ರಮಾಣಪತ್ರ ಪ್ರಕರಣ! ವ್ಯವಸ್ಥೆ ಎಷ್ಟು ಕೊಳೆತಿದೆ?”ರಾಜಕೀಯದಲ್ಲಿ ಮೀಸಲು ಪ್ರಮುಖ ಚರ್ಚೆಯ ವಿಷಯವಾಗಿರುವಾಗ, ಮತ್ತೊಂದೆಡೆ ಅದರ ದುರುಪಯೋಗದ ಆರೋಪಗಳು ಹೊರಬರುತ್ತಿರುವುದು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗಿದೆ. 

    ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸರ್ವೇಶನ್ ಹಟಾವೋ’ ಅಭಿಯಾನ ಭಾರೀ ಚರ್ಚೆಗೆ ಗ್ರಾಸವಾಗಿದೆ. ಲಕ್ಷಾಂತರ ಜನರು ಮೀಸಲು ವ್ಯವಸ್ಥೆಯಲ್ಲಿ ಸುಧಾರಣೆ, ಪಾರದರ್ಶಕತೆ ಮತ್ತು ನಿಜವಾದ ಅರ್ಹರಿಗೆ ನ್ಯಾಯ ಸಿಗಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲೇ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ಒಂದು ಪ್ರಕರಣ ಮತ್ತೊಮ್ಮೆ ಮೀಸಲು ವ್ಯವಸ್ಥೆಯ ದುರುಪಯೋಗದ ಬಗ್ಗೆ ತೀವ್ರ ಪ್ರಶ್ನೆಗಳನ್ನು ಎಬ್ಬಿಸಿದೆ.

    ಬೆಂಗಳೂರಿನಲ್ಲಿ ವಿಚಾರಣೆಗೆ ಬಂದ ಪ್ರಕರಣದಲ್ಲಿ, ಕೆಪಿಎಸ್‌ಸಿ ಕೈಗಾರಿಕಾ ವಿಸ್ತರಣಾಧಿಕಾರಿ ನೇಮಕಾತಿಯ ವೇಳೆ ಸುಳ್ಳು ಜಾತಿ ಹಾಗೂ ಆದಾಯ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಸುಮಾ ಎಸ್. ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತೀವ್ರವಾಗಿ ಪ್ರಶ್ನಿಸಿತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೇಳಿದ್ದ ಅರ್ಜಿಯ ವಿಚಾರಣೆ ವೇಳೆ ಹಲವು ಕಟು ಪ್ರಶ್ನೆಗಳನ್ನು ಕೇಳಿತು.

    ನ್ಯಾಯಾಲಯದ ಪ್ರಶ್ನೆಗಳು ಪ್ರಕರಣದ ಗಂಭೀರತೆಯನ್ನು ಸ್ಪಷ್ಟಪಡಿಸಿದವು. “ವರ್ಷಕ್ಕೆ ಕೇವಲ ₹40 ಸಾವಿರ ಆದಾಯವಿದೆ ಎಂದು ಹೇಗೆ ತೋರಿಸಿದ್ದೀರಿ? ಕೆಪಿಎಸ್‌ಸಿ ಅಧ್ಯಕ್ಷರ ಸಂಬಳವೇ ತಿಂಗಳಿಗೆ ಲಕ್ಷಾಂತರ (ಸುಮಾರು2.70lakhs)ರೂಪಾಯಿಗಳಿರುವಾಗ ಈ ಪ್ರಮಾಣಪತ್ರವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ?” ಎಂದು ನ್ಯಾಯಪೀಠ ಪ್ರಶ್ನಿಸಿತು. ಜೊತೆಗೆ, ತಪ್ಪು ಮಾಹಿತಿ ನೀಡಿ ನಿಜವಾದ ಬಡ ಅಭ್ಯರ್ಥಿಯ ಅವಕಾಶ ಕಸಿದುಕೊಂಡಿರುವ ಆರೋಪವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ ಎಂದು ಕೂಡ ಕಿಡಿಕಾರಿತು.

    ಇನ್ನೂ ಒಂದು ಪ್ರಮುಖ ಪ್ರಶ್ನೆ ನ್ಯಾಯಾಲಯದಿಂದ ಕೇಳಿಬಂತು.ನಿಮ್ಮ ಅರ್ಜಿದಾರರು 3ಬಿ ಮೀಸಲು ಕೆಟಗರಿಯಲ್ಲಿ ಕುಟುಂಬದ ಒಟ್ಟು ವಾರ್ಷಿಕ ಆದಾಯ ತೋರಿಸುವ ಮೂಲಕ ಅರ್ಹ ಬಡ ಅಭ್ಯರ್ಥಿಯೊಬ್ಬರ ಭವಿಷ್ಯವನ್ನೇ ಕಿತ್ತುಕೊಂಡಿದ್ದಾರೆ,” “ನೀವು ಅಭ್ಯರ್ಥಿತನ ಹಿಂಪಡೆದರೆ ಎಲ್ಲವೂ ಸರಿಯಾಗಿಬಿಡುತ್ತದೆಯೇ? ನಿಮ್ಮಿಂದ ವಂಚನೆಗೊಳಗಾದ ನಿಜವಾದ ಅರ್ಹ ಅಭ್ಯರ್ಥಿಗೆ ನ್ಯಾಯವನ್ನು ಯಾರು ಕೊಡುತ್ತಾರೆ?”ಎಂಬ ಪ್ರಶ್ನೆ ಪ್ರಕರಣದ ಸಾಮಾಜಿಕ ಪರಿಣಾಮವನ್ನು ತೋರಿಸಿತು.

    ಅರ್ಜಿದಾರರ ಪರ ವಕೀಲರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿ ಕಾನೂನು ಲೋಪಗಳಿವೆ ಎಂದು ವಾದಿಸಿದರೂ, ನ್ಯಾಯಪೀಠ “ಎಫ್‌ಐಆರ್ ದಾಖಲು ಮಾಡುವಲ್ಲಿ ಯಾವ ಘನಂದಾರಿ ಕಾನೂನು ಲೋಪವಾಗಿದೆ ಎಂದು ಹೇಳುತ್ತಿದ್ದೀರಿ? “ತನಿಖೆ ನಡೆಯಲಿ. ಆರೋಪಗಳು ಸುಳ್ಳಾಗಿದ್ದರೆ ತನಿಖೆಯಲ್ಲೇ ಅದು ಹೊರಬರುತ್ತದೆ” ಎಂದು ಸ್ಪಷ್ಟಪಡಿಸಿತು.

    ಇದೇ ವೇಳೆ, ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನೂ ಹೈಕೋರ್ಟ್ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ….

    ಇದು ಅವರ ಮಗಳು ಸುಮಾ ಸಾಹುಕಾರ್ ಅರ್ಜಿ ವಿಚಾರಣೆಯಾಗಿತ್ತು .ತಮ್ಮ ವಿರುದ್ಧ • ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಕೆಪಿಎಸ್‌ಸಿಯಿಂದ ಅಮಾನತುಗೊಂಡಿರುವ ಈಕೆ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು.

    ಸುಮಾ ಎಸ್.ಸಾಹುಕಾರ್ ಅವರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ಅವರು ಅರ್ಜಿಯನ್ನು ವಾಪಸ್ ಪಡೆದ ಪ್ರಸಂಗ ಸೋಮವಾರ ನ್ಯಾಯಾಲಯದಲ್ಲಿ ನಡೆಯಿತು. 

    ಈ ಘಟನೆ ಈಗ ದೊಡ್ಡ ಸಾಮಾಜಿಕ ಪ್ರಶ್ನೆಯಾಗಿ ರೂಪುಗೊಳ್ಳುತ್ತಿದೆ. ಮೀಸಲು ವ್ಯವಸ್ಥೆಯ ಉದ್ದೇಶ ಇತಿಹಾಸಾತ್ಮಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅವಕಾಶ ಕಲ್ಪಿಸುವುದು.

    ಆದರೆ ನಕಲಿ ಜಾತಿ ಅಥವಾ ಆದಾಯ ಪ್ರಮಾಣಪತ್ರಗಳ ಮೂಲಕ ಕೆಲವರು ಅನ್ಯಾಯವಾಗಿ ಲಾಭ ಪಡೆಯುತ್ತಾರೆ ಎಂಬ ಆರೋಪಗಳು ಸಾಬೀತಾದರೆ, ಅದರ ನಷ್ಟ ನಿಜವಾದ ಅರ್ಹ ಅಭ್ಯರ್ಥಿಗಳಿಗೆ ಆಗುತ್ತದೆ.

    ಇಂತಹ ಘಟನೆಗಳು ಬಹಿರಂಗವಾಗುವಾಗ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ‘ರಿಸರ್ವೇಶನ್ ಹಟಾವೋ’ ಅಭಿಯಾನಕ್ಕೆ ಇನ್ನಷ್ಟು ಚರ್ಚೆ ಸಿಗುತ್ತಿದೆ. ಆದರೆ ಈ ಪ್ರಕರಣವೊಂದರಿಂದಲೇ ಸಂಪೂರ್ಣ ಮೀಸಲು ವ್ಯವಸ್ಥೆಯನ್ನು ತೀರ್ಮಾನಿಸಲು ಸಾಧ್ಯವಿಲ್ಲ. ನಿಜವಾದ ಪ್ರಶ್ನೆ ಮೀಸಲು ಇರಬೇಕೆ ಅಥವಾ ಬೇಡವೆ ಎನ್ನುವುದಕ್ಕಿಂತ, ದುರುಪಯೋಗ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಹೇಗೆ ಜಾರಿಯಾಗಬೇಕು, ನಕಲಿ ಪ್ರಮಾಣಪತ್ರಗಳನ್ನು ಹೇಗೆ ತಡೆಯಬೇಕು ಮತ್ತು ನಿಜವಾದ ಫಲಾನುಭವಿಗಳಿಗೆ ನ್ಯಾಯ ಹೇಗೆ ಖಚಿತಪಡಿಸಬೇಕು ಎನ್ನುವುದಾಗಿದೆ.

    ಅನೇಕ ನಾಗರಿಕರು ವ್ಯಕ್ತಪಡಿಸುತ್ತಿರುವ ಆತಂಕವೂ ಇದೇ. ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರ, ನಕಲಿ ದಾಖಲೆಗಳು ಮತ್ತು ಪ್ರಭಾವ ಬಳಕೆಯ ಆರೋಪಗಳು ಸಂಪೂರ್ಣ ನೇಮಕಾತಿ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಂದಿಸುತ್ತವೆ. ಆದ್ದರಿಂದ, ಪಾರದರ್ಶಕ ಪರಿಶೀಲನೆ, ತ್ವರಿತ ತನಿಖೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಎಂಬುದೇ ಜನರ ಪ್ರಮುಖ ನಿರೀಕ್ಷೆಯಾಗಿದೆ. ಹೀಗೆ ಮಾತ್ರ ನಿಜವಾದ ಅರ್ಹ ಅಭ್ಯರ್ಥಿಗಳ ಹಕ್ಕು ರಕ್ಷಣೆ ಸಾಧ್ಯವಾಗುತ್ತದೆ.

    ##KPSC #KarnatakaHighCourt #JusticeMNagaprasanna #FakeCasteCertificate #FakeIncomeCertificate #ShivashankarSahukar #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ”